ಜಮ್ಮು ಮತ್ತು ಕಾಶ್ಮೀರದ ರಾಂಬನ್ ಎಂಬಲ್ಲಿ ಬಸ್ ಕಂದಕಕ್ಕೆ ಉರುಳಿದೆ. ಈ ಅಪಘಾತದಲ್ಲಿ ಸ್ಥಳದಲ್ಲೇ 16 ಮಂದಿ ಸಾವನ್ನಪ್ಪಿದ್ದು 27 ಮಂದಿಗೆ ಗಂಭೀರ ಗಾಯಗಳಾಗಿವೆ. ಇನ್ನು ಗಾಯಗೊಂಡವರಲ್ಲಿ ಹಲವರ ಪರಿಸ್ಥಿತಿ ಗಂಭೀರವಾಗಿದ್ದು ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ. ಇನ್ನು ಸ್ಥಳೀಯ ಪೊಲೀಸರು ಮತ್ತು ಭಾರತೀಯ ಸೇನೆಯ ಯೋಧರು ರಕ್ಷಣಾ ಕಾರ್ಯಾಚರಣೆ ನಡೆಸಿ ಬಸ್ ನಲ್ಲಿ ಸಿಲುಕಿಕೊಂಡಿರುವವರ ರಕ್ಷಣೆ ಮಾಡಿದ್ದಾರೆ.