ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿಸುವ ಸುಷ್ಮಾ ಸ್ವರಾಜ್ ಅವರು, ನಾಪತ್ತೆಯಾಗಿರುವ ಭಾರತೀಯರ ಕುಟುಂಬಸ್ಥರನ್ನು ನಾನು ಈ ಹಿಂದೆ ಕೂಡ ಹಲವು ಬಾರಿ ಭೇಟಿ ಮಾಡಿದ್ದೇನೆ. ಆದರೆ, ಈ ಬಾರಿ ಪರಿಸ್ಥಿತಿ ಬದಲಾಗಿದೆ. ಇಸಿಸ್ ಕಪಿಮುಷ್ಟಿಯಿಂದ ಮೊಸುಲ್ ಸ್ವತಂತ್ರಗೊಂಡಿದೆ ಎಂದು ಈ ಹಿಂದೆ ಇರಾಕ್ ಪ್ರಧಾನಿ ಮಂತ್ರಿ ಘೋಷಣೆ ಮಾಡಿದ್ದರು. ಈ ಘೋಷಣೆ ಬಳಿಕ ಇರಾಕ್ ಭೇಟಿ ನೀಡುವಂತೆ ವಿ.ಕೆ.ಸಿಂಗ್ ಅವರಿಗೆ ಸೂಚನೆ ನೀಡಿದ್ದೆ. ಆದರೆ, ಈಗಲೂ ಇರಾಕ್'ನ ಪಶ್ಚಿಮ ಮೊಸುಲ್ ನಲ್ಲಿ ಹೋರಾಟಗಳು ಮುಂದುವರೆಯುತ್ತಿರುವುದಾಗಿ ತಿಳಿದುಬಂದಿದೆ ಎಂದು ಹೇಳಿದ್ದಾರೆ.