ಭ್ರಷ್ಟಾಚಾರ ಆರೋಪ ಕೇಳಿ ಬಂದ ಹಿನ್ನಲೆಯಲ್ಲಿ ಜೆಡಿಯು ಪಕ್ಷದ ನಾಯಕರು ತೇಜಸ್ವಿಯವರ ರಾಜಿನಾಮೆಗೆ ಆಗ್ರಹಿಸುತ್ತಿರುವ ಹಿನ್ನಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ಲಾಲೂ ಪ್ರಸಾದ್ ಯಾದವ್ ಅವರು, ತೇಜಸ್ವಿ ಯಾದವ್ ಅವರು ಯಾವುದೇ ಕಾರಣಕ್ಕೂ ರಾಜಿನಾಮೆಯನ್ನು ನೀಡಬಾರದುಎಂದು ಪಕ್ಷದ ವಿಧಾನಮಂಡಳ ನಿರ್ಧಾರ ತೆಗೆದುಕೊಂಡಿದೆ. ಕೇವಲ ಎಫ್ಐಆರ್ ದಾಖಲಾಗಿದೆ ಎಂಬ ಕಾರಣಕ್ಕೆ ರಾಜಿನಾಮೆಯನ್ನು ನೀಡಲು ಸಾಧ್ಯವಿಲ್ಲ ಎಂದು ತಿಳಿಸಿದ್ದಾರೆ.