ಇದಕ್ಕೆ ತಿರುಗೇಟು ನೀಡಿದ ಭಾರತೀಯ ಸೇನೆಯ ಕಾರ್ಯಾಚರಣೆಗಳ ಮಹಾ ನಿರ್ದೇಶನಾಲಯದ ಲೆ.ಜ. ಎ.ಕೆ.ಭಟ್ ಅವರು, ಗಡಿಯಲ್ಲಿ ಪಾಕಿಸ್ತಾನವೇ ಕದನ ವಿರಾಮವನ್ನು ಉಲ್ಲಂಘನೆ ಮಾಡುತ್ತಿದ್ದು, ದಾಳಿಗೆ ಪ್ರತಿಕ್ರಿಯೆ ನೀಡುವ ಹಕ್ಕು ಭಾರತೀಯ ಸೇನೆಗಿದೆ. ಅಪ್ರಚೋದಿತ ಗುಂಡಿನ ದಾಳಿಗೆ ಭಾರತೀಯ ಸೇನೆ ದಿಟ್ಟ ಉತ್ತರವನ್ನು ನೀಡುತ್ತಿದೆ. ಗಡಿಯಲ್ಲಿ ಶಾಂತಿ ಸ್ಥಾಪನೆ ಕಾಯ್ದುಕೊಳ್ಳುವಲ್ಲಿ ಭಾರತೀಯ ಸೇನೆ ಪ್ರಾಮಾಣಿಕವಾಗಿ ಕರ್ತವ್ಯ ನಿರ್ವಹಿಸುತ್ತಿದೆ ಎಂದು ತಿಳಿಸಿದ್ದಾರೆ.