ಸರಕು ಮತ್ತು ಸೇವಾ ತೆರಿಗೆ ಜಾರಿಯ ಬಗ್ಗೆ ಶ್ಲಾಘನೆ ವ್ಯಕ್ತಪಡಿಸಿದ ಅವರು, ಜಿಎಸ್ ಟಿಯ ಪರಿಕಲ್ಪನೆ ಒಟ್ಟಿಗೆ ಬಲವಾಗಿ ಬೆಳೆಯುವುದಾಗಿದೆ (Growing Stronger Together). ಜಿಎಸ್ ಟಿ ಜಾರಿಯಿಂದ ಮುಂಗಾರು ಅಧಿವೇಶನ ಉತ್ಸಾಹದಿಂದ ತುಂಬಿರುತ್ತದೆ ಎಂದು ಭಾವಿಸುತ್ತೇನೆ. ಎಲ್ಲಾ ಪಕ್ಷಗಳು, ಸಂಸದರು ದೇಶದ ಜನರ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ಅಧಿವೇಶನ ಕಲಾಪದಲ್ಲಿ ಭಾಗವಹಿಸುವ ವಿಶ್ವಾಸವನ್ನು ಹೊಂದಿದ್ದೇನೆ ಎಂದು ಹೇಳಿದರು.