ಮೂಲಗಳ ಪ್ರಕಾರ, ಭ್ರಷ್ಟಾಚಾರ ಆರೋಪ ಎದುರಿಸುತ್ತಿರುವ ತೇಜಸ್ವಿ ಯಾದವ್ ಅವರ ರಾಜಿನಾಮೆ ಪಡೆಯುವ ಬಗ್ಗೆ ಲಾಲು ಪ್ರಸಾದ್ ಯಾದವ್ ಅವರು ತುಟಿ ಬಿಚ್ಚದಿರುವುದರಿಂದ ನಿತೀಶ್ ಕುಮಾರ್ ಅವರು ತಮ್ಮ ನೇತೃತ್ವದ ಮಹಾ ಮೈತ್ರಿಕೂಟ ಸರ್ಕಾರ ಬಲಿ ಕೊಡಲು ಸಿದ್ಧರಾಗಿದ್ದು, ಹೊಸದಾಗಿ ಜನಾದೇಶವನ್ನು ಪಡೆಯುವ ನಿರ್ಧಾರ ಕೈಗೊಳ್ಳಲಿದ್ದಾರೆ ಎನ್ನಲಾಗಿದೆ.