ಮಾತನಾಡಲು ಅವಕಾಶ ನೀಡಿ ಇಲ್ಲವೇ ರಾಜೀನಾಮೆ ನೀಡುತ್ತೇನೆ ಎಂದು ಮಾಯಾವತಿ ಹೇಳಿದ್ದಾರೆ. ಕೇಂದ್ರ ಸರ್ಕಾರ ದಲಿತರ ಮೇಲೆ ನಡೆಯುತ್ತಿರುವ ದೌರ್ಜನ್ಯಗಳನ್ನು ತಡೆಗಟ್ಟಲು ಸೂಕ್ತ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಆರೋಪಿಸಿರುವ ಮಾಯಾವತಿ, ಬಿಜೆಪಿ ಅಧಿಕಾರಕ್ಕೆ ಬಂದಾಗಿನಿಂದಲೂ ದಲಿತರ ಮೇಲೆ, ಬಡವರ ಮೇಲೆ, ಹಿಂದುಳಿದ ವರ್ಗಗಳ ಮೇಲೆ ದೌರ್ಜನ್ಯಗಳು ಹೆಚ್ಚುತ್ತಿವೆ. ಉತ್ತರ ಪ್ರದೇಶದಲ್ಲಿ ಇವಿಎಂ ದುರ್ಬಳಕೆ ಮಾಡುವ ಮೂಲಕ ಬಿಜೆಪಿ ಸರ್ಕಾರ ರಚಿಸಿದೆ ಉತ್ತರ ಪ್ರದೇಶದಲ್ಲಿ ಯಾವುದೇ ಸಮುದಾಯವೂ ಸುರಕ್ಷಿತವಾಗಿಲ್ಲ, ದಲಿತರ ಪರಿಸ್ಥಿತಿ ಮತ್ತಷ್ಟು ಹದಗೆಟ್ಟಿದೆ ಎಂದು ಆರೋಪಿಸಿದ್ದಾರೆ.