ವೆಂಕಯ್ಯ ನಾಯ್ಡು
ವೆಂಕಯ್ಯ ನಾಯ್ಡು

ನಾಯ್ಡುರನ್ನು ಉಪ ರಾಷ್ಟ್ರಪತಿ ಅಭ್ಯರ್ಥಿ ಮಾಡಿರುವುದು 'ಐತಿಹಾಸಿಕ ನಿರ್ಧಾರ": ಬಂಡಾರು ದತ್ತಾತ್ರೇಯ

ವೆಂಕಯ್ಯ ನಾಯ್ಡು ಅವರನ್ನು ಆಡಳಿತಾರೂಢ ಎನ್ ಡಿಎ ಸರ್ಕಾರದ ಉಪ ರಾಷ್ಟ್ರಪತಿ ಅಭ್ಯರ್ಥಿಯಾಗಿ ಆಯ್ಕೆ ಮಾಡಿರುವು ಐತಿಹಾಸಿಕ ನಿರ್ಧಾರ ಎಂದು ಕೇಂದ್ರ ಕಾರ್ಮಿಕ ಸಚಿವ ಬಂಡಾರು ದತ್ತಾತ್ರೇಯ ಅವರು ಮಂಗಳವಾರ ಹೇಳಿದ್ದಾರೆ...

ನವದೆಹಲಿ: ವೆಂಕಯ್ಯ ನಾಯ್ಡು ಅವರನ್ನು ಆಡಳಿತಾರೂಢ ಎನ್ ಡಿಎ ಸರ್ಕಾರದ ಉಪ ರಾಷ್ಟ್ರಪತಿ ಅಭ್ಯರ್ಥಿಯಾಗಿ ಆಯ್ಕೆ ಮಾಡಿರುವು ಐತಿಹಾಸಿಕ ನಿರ್ಧಾರ ಎಂದು ಕೇಂದ್ರ ಕಾರ್ಮಿಕ ಸಚಿವ ಬಂಡಾರು ದತ್ತಾತ್ರೇಯ ಅವರು ಮಂಗಳವಾರ ಹೇಳಿದ್ದಾರೆ. 


ಈ ಕುರಿತಂತೆ ಮಾತನಾಡಿರುವ ಅವರು, ಉಪ ರಾಷ್ಟ್ರಪತಿ ಸ್ಥಾನಕ್ಕೆ ವೆಂಕಯ್ಯ ನಾಯ್ಡು ಅವರು ಅರ್ಹ ಅಭ್ಯರ್ಥಿಯಾಗಿದ್ದಾರೆ. ನಾಯ್ಡು ಅತ್ಯಂತ ಅನುಭವವುಳ್ಳ ವ್ಯಕ್ತಿಯಾಗಿದ್ದು, ತಮ್ಮ ಕರ್ತವ್ಯವನ್ನು ಸೂಕ್ತ ರೀತಿಯಲ್ಲಿ ನಿಭಾಯಿಸುತ್ತಾರೆಂದು ಹೇಳಿದ್ದಾರೆ. 

ನಾಯ್ಡು ಅವರನ್ನು ಉಪರಾಷ್ಟ್ರಪತಿ ಅಭ್ಯರ್ಥಿಯಾಗಿ ಆಯ್ಕೆ ಮಾಡಿರುವುದು ಐತಿಹಾಸಿಕ ನಿರ್ಧಾರವಾಗಿದೆ. ಉಪ ರಾಷ್ಟ್ರಪತಿ ಸ್ಥಾನಕ್ಕೆ ಅತ್ಯುತ್ತಮ ವ್ಯಕ್ತಿಯಾಗಿದ್ದಾರೆ. ತೆಲುಗು ಸಮುದಾಯಕ್ಕೆ ಇದೊಂದು ಹೆಮ್ಮೆಯ ವಿಚಾರವಾಗಿದೆ. ನಾಯ್ಡು ಅವರಿಗೆ ಎಲ್ಲಾ ಪಕ್ಷಗಳು ಬೆಂಬಲ ವ್ಯಕ್ತಪಡಿಸಬೇಕೆಂದು ಬಯಸುತ್ತೇನೆ. ಈ ಮೂಲಕ ನಾಯ್ಡು ಅವರಿಗೆ ಶುಭ ಹಾರೈಸುತ್ತೇನೆಂದು ತಿಳಿಸಿದ್ದಾರೆ. 

Related Stories

No stories found.

Advertisement

X
Kannada Prabha
www.kannadaprabha.com