ಹಿಮಾಚಲ ಪ್ರದೇಶದಲ್ಲಿ ಬಸ್ ದುರಂತ, 28 ಸಾವು: ಪ್ರಧಾನಿ ಮೋದಿ ಸಂತಾಪ

ಹಿಮಾಚಲ ಪ್ರದೇಶದ ಸೋಲನ್ ಬಳಿ ಸಂಭವಿಸಿದ ಬಸ್ ದುರಂತಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಸಂತಾಪ ಸೂಚಿಸಿದ್ದಾರೆ.
ನರೇಂದ್ರ ಮೋದಿ
ನರೇಂದ್ರ ಮೋದಿ
Updated on
ನವದೆಹಲಿ: ಹಿಮಾಚಲ ಪ್ರದೇಶದ ಸೋಲನ್ ಬಳಿ ಸಂಭವಿಸಿದ ಬಸ್ ದುರಂತಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಸಂತಾಪ ಸೂಚಿಸಿದ್ದಾರೆ.
ಬಸ್ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಆ ನೋವನ್ನು ತಡೆದುಕೊಳ್ಳುವ ಶಕ್ತಿಯನ್ನು ದೇವರ ದಯ ಪಾಲಿಸಲಿ. ಇನ್ನು ದುರಂತದಲ್ಲಿ ಗಾಯಗೊಂಡಿರುವವರು ಶೀಘ್ರ ಗುಣಮುಖರಾಗಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.
ಇಂದು ಬೆಳಗ್ಗೆ 9.15ರ ಸುಮಾರಿಗೆ 40 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಬಸ್ಸು ಶಿಮ್ಲಾದಿಂದ ಕಿನ್ನೌರ್ ಗೆ ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ 5ರಲ್ಲಿ ಕೆಳಗೆ ಉರುಳಿ ಕಂದಕಕ್ಕೆ ಬಿದ್ದಿತು. ಈ ಅಪಘಾತದಲ್ಲಿ 28 ಮಂದಿ ಮೃತಪಟ್ಟಿದ್ದು 9 ಮಂದಿ ಗಾಯಗೊಂಡಿದ್ದರು. 
ಸ್ಥಳೀಯರು ಮತ್ತು ಪೊಲೀಸರು ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದು ಗಾಯಗೊಂಡಿರುವವರನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com