ಲಾಲೂ ಪುತ್ರ ತೇಜ್ ಪ್ರತಾಪ್ ಪೆಟ್ರೋಲ್ ಬಂಕ್ ಪರವಾನಗಿ ರದ್ಧುಗೊಳಿಸಿದ ಭಾರತ್ ಪೆಟ್ರೋಲಿಯಂ

ರ್ ಜೆಡಿ ಮುಖಂಡ ಲಾಲೂ ಪ್ರಸಾದ್ ಯಾದವ್ ಪುತ್ರ ತೇಜ್ ಪ್ರತಾಪ್ ಒಡೆತನದ ಪೆಟ್ರೋಲ್ ಬಂಕ್ ಪರವಾನಗಿಯನ್ನು ಭಾರತ್ ಪೆಟ್ರೋಲಿಯಂ...
ತೇಜ್ ಪ್ರತಾಪ್
ತೇಜ್ ಪ್ರತಾಪ್
Updated on
ಪಾಟ್ನಾ: ಆರ್ ಜೆಡಿ ಮುಖಂಡ ಲಾಲೂ ಪ್ರಸಾದ್ ಯಾದವ್ ಪುತ್ರ ತೇಜ್ ಪ್ರತಾಪ್ ಒಡೆತನದ ಪೆಟ್ರೋಲ್ ಬಂಕ್ ಪರವಾನಗಿಯನ್ನು ಭಾರತ್ ಪೆಟ್ರೋಲಿಯಂ ರದ್ದುಗೊಳಿಸಿದೆ.
ಪೆಟ್ರೋಲ್ ಪಂಪ್ ಪರವಾನಗಿ ರದ್ದು ಪಡಿಸುವುದನ್ನು ಪ್ರಶ್ನಿಸಿ 29 ವರ್ಷದ ತೇಜ್ ಪ್ರತಾಪ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಪಾಟ್ನಾ  ನ್ಯಾಯಾಲಯ ಭಾರತ್ ಪೆಟ್ರೋಲಿಯಂ ನಿಗಮದ ಮೇಲೆ ಹೇರಿದ್ದ ತಡೆಯಾಜ್ಞೆ ಆದೇಶ ತೆರವುಗೊಳಿಸಿದ ಮೇಲೆ ಪರವಾನಗಿ ರದ್ದು ಪಡಿಸಲಾಗಿದೆ.
ಪೆಟ್ರೋಲ್ ಬಂಕ್ ಪರವಾನಗಿ ಪಡೆಯಲು ತಪ್ಪು ಮಾಹಿತಿ ನೀಡಿರುವುದಕ್ಕೆ ಸಂಬಂಧಿಸಿದಂತೆ ತೇಜ್ ಪ್ರತಾಪ್ ಅವರಿಗೆ ನೋಟಿಸ್ ನೀಡಲಾಗಿತ್ತು,  ಪೆಟ್ರೋಲ್ ಬಂಕ್ ಪರವಾನಗಿ ಹೇಗೆ ಪಡೆದುಕೊಂಡಿರಿ ಎಂದು ವಿವರಣೇ ಕೇಳಿ ತೇಜ್ ಪ್ರತಾಪ್ ಗೆ ಭಾರತ್ ಪೆಟ್ರೋಲಿಯಂ ನಿಗಮ ನೋಟಿಸ್ ನೀಡಿತ್ತು. ತೇಜ್ ಪ್ರತಾಪ್ ತಪ್ಪು ಮಾಹಿತಿ ನೀಡಿದ್ದಾರೆ ಎಂದು ಬಿಜೆಪಿ ಆರೋಪ ಮಾಡಿತ್ತು. ಪೆಟ್ರೋಲ್ ಪಂಪ್ ಕಾರ್ಯ ನಿರ್ವಹಿಸುತ್ತಿಲ್ಲ ಎಂದು ಆರ್ ಆರ್ ಜೆಡಿ ಸಮರ್ಥನೆ ನೀಡಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com