ಉದಯ್ ಪುರ: ರಾಜಸ್ತಾನದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಪ್ರವಾಸಿಗರನ್ನು ಹೊತ್ತೊಯ್ಯುತ್ತಿದ್ದ ಬಸ್ ಪಲ್ಟಿಯಾಗಿ 9 ಮಂದಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಶನಿವಾರ ನಡೆದಿದೆ.
ರಾಜಸ್ತಾನದ ಉದಯ್ ಪುರದ ನೆಹ್ಲಾ ಗ್ರಾಮದ ಬಳಿ ಈ ಅಪಘಾತ ಸಂಭವಿಸಿದ್ದು, ವೇಗದಲ್ಲಿದ್ದ ಬಸ್ ಚಾಲಕ ಮುಂದೆ ಹೋಗುತ್ತಿದ್ದ ಬೈಕ್ ಗೆ ಢಿಕ್ಕಿಯಾಗುವುದನ್ನು ತಪ್ಪಿಸಲು ಸ್ಟೇರಿಂಗ್ ತಿರುಗಿಸಿದ್ದಾನೆ, ಈ ವೇಳೆ ಬಸ್ ಪಲ್ಟಿಯಾಗಿ 9 ಮಂದಿ ಸಾವನ್ನಪ್ಪಿದ್ದಾರೆ. ಮೃತರ ಪೈಕಿ ಆರು ಮಹಿಳೆಯರು 3 ಮಂದಿ ಪುರುಷರು ಎಂದು ತಿಳಿದುಬಂದಿದೆ.
ಬಸ್ ನಿನ್ನೆ ರಾತ್ರಿಯಷ್ಟೇ ಅಹ್ಮದಾಬಾದ್ ನಿಂದ ಪುಷ್ಕರ್ ಮತ್ತು ಹರಿದ್ವಾರ ಸೇರಿದಂತೆ 16 ತೀರ್ಥಕ್ಷೇತ್ರಗಳಿಗೆ ಪ್ರವಾಸಿಗರನ್ನು ಹೊತ್ತು ಪ್ರಯಾಣ ಬೆಳೆಸಿತ್ತು ಎಂದು ಸ್ಥಳೀಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಪ್ರಸ್ತುತ ಗಾಯಾಳು ಪ್ರವಾಸಿಗರನ್ನು ಸಮೀಪದ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
Advertisement