ರಾಜ್ಯಗಳು ಪ್ರತ್ಯೇಕ ಧ್ವಜ ಹೊಂದುವುದರಲ್ಲಿ ತಪ್ಪಿಲ್ಲ: ತರೂರ್

ರಾಜ್ಯಗಳು ಪ್ರತ್ಯೇಕ ಧ್ವಜಗಳನ್ನು ಹೊಂದುವುದರಲ್ಲಿ ತಪ್ಪಿಲ್ಲ, ಈ ವಿಷಯದ ಬಗ್ಗೆ ರಾದ್ಧಾಂತ ಮಾಡುವ ಅವಶ್ಯಕತೆ ಇಲ್ಲ ಎಂದು ಕಾಂಗ್ರೆಸ್ ಸಂಸದ ಶಶಿ ತರೂರ್ ಹೇಳಿದ್ದಾರೆ.
ಶಶಿತರೂರ್
ಶಶಿತರೂರ್
ಬೆಂಗಳೂರು: ರಾಜ್ಯಗಳು ಪ್ರತ್ಯೇಕ ಧ್ವಜಗಳನ್ನು ಹೊಂದುವುದರಲ್ಲಿ ತಪ್ಪಿಲ್ಲ, ಈ ವಿಷಯದ ಬಗ್ಗೆ ರಾದ್ಧಾಂತ ಮಾಡುವ ಅವಶ್ಯಕತೆ ಇಲ್ಲ ಎಂದು ಕಾಂಗ್ರೆಸ್ ಸಂಸದ ಶಶಿ ತರೂರ್ ಹೇಳಿದ್ದಾರೆ. 
ಬೆಂಗಳೂರಿನಲ್ಲಿ ಮಾತನಾಡಿರುವ ಶಶಿತರೂರ್, ರಾಜ್ಯ ಧ್ವಜಗಳನ್ನು ರಾಷ್ಟ್ರಧ್ವಜಗಳ ಬದಲಿಗೆ ಬಳಸುವಂತಿಲ್ಲ ಹಾಗೂ ಅದು ರಾಷ್ಟ್ರಧ್ವಜಕ್ಕಿಂತ ಕಡಿಮೆ ಎತ್ತರದಲ್ಲಿ ಹಾರಾಡಬೇಕು ಎಂಬಂತಹ ನಿಯಮಗಳನ್ನು ರೂಪಿಸಬೇಕು ಎಂದು ಶಶಿ ತರೂರ್ ಹೇಳಿದ್ದಾರೆ. 
ಪ್ರತ್ಯೇಕ ರಾಜ್ಯ ಧ್ವಜಕ್ಕೆ ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ರಾಜ್ಯಕ್ಕೆ ಪ್ರತ್ಯೇಕ ಧ್ವಜದ ಬಗ್ಗೆ ವರದಿ ನೀಡುವುದಕ್ಕಾಗಿ 9 ಸದಸ್ಯರ ಸಮಿತಿಯನ್ನು ರಚಿಸಿತ್ತು. ಈ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ಶಶಿ ತರೂರ್ ರಾಜ್ಯಗಳು ಪ್ರತ್ಯೇಕ ಧ್ವಜ ಹೊಂದುವುದರಲ್ಲಿ ತಪ್ಪಿಲ್ಲ ಎಂದು ಹೇಳಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com