ನಂತರ ಭಯೋತ್ಪಾದನೆಯನ್ನು ಪ್ರಾಯೋಜಿಸುತ್ತಿರುವ ಪಾಕಿಸ್ತಾನ ವಿರುದ್ಧ ಕಿಡಿಕಾರಿರುವ ಅವರು, ಪಾಕಿಸ್ತಾನ ಭಯೋತ್ಪಾದನೆಗೆ ಆರ್ಥಿಕ ನೆರವು ನೀಡುತ್ತಿದ್ದು, ಕಾಶ್ಮೀರದಲ್ಲಿ ಹಿಂಸಾಚಾರಗಳನ್ನು ಸೃಷ್ಟಿಸುತ್ತಿದೆ. ನಮ್ಮದು ಶಾಂತಿ ಬಯಸುವ ದೇಶವಾಗಿದ್ದು, ಯುದ್ಧವನ್ನು ಬಯಸುವುದಿಲ್ಲ. ನಮ್ಮ ಶಾಂತಿಗೆ ಧಕ್ಕೆ ತರುವ ಪ್ರಯತ್ನಗಳನ್ನು ಮಾಡಿದರೆ, ನಮ್ಮ ವೀರ ಯೋಧರು ತಕ್ಕ ಪ್ರತ್ಯುತ್ತರವನ್ನು ನೀಡುತ್ತಾರೆಂದು ತಿಳಿಸಿದ್ದಾರೆ.