ಪಂಡಿತರ ಹತ್ಯೆಗೆ ಸಂಬಂಧಿಸಿದ 215 ಪ್ರಕರಣಗಳನ್ನು ಮರುತನಿಖೆಗೆ ಆದೇಶಿಸಬೇಕು ಹಾಗೂ ಪ್ರತ್ಯೇಕತಾವಾದಿ ನಾಯಕ ಯಾಸೀನ್ ಮಲೀಕ್ ಸೇರಿದಂತೆ ಹಲವರನ್ನು ಮರು ವಿಚಾರಣೆಗೊಳಪಡಿಸಬೇಕು ಎಂದು ಆಗ್ರಹಿಸಿ ರೂಟ್ಸ್ ಆಫ್ ಕಾಶ್ಮೀರ್ ಸಂಘಟನೆಯ ಪರ ವಕೀಲ ವಿಕಾಸ್ ಪಡೋರಾ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿರುವ ಸುಪ್ರೀಂ ಕೋರ್ಟ್ ನ ಮುಖ್ಯನ್ಯಾಯಮೂರ್ತಿ ಜೆಎಸ್ ಖೇಹರ್ ಹಾಗೂ ನ್ಯಾ.ಡಿವೈ ಚಂದ್ರಚೂಡ್ 27 ವರ್ಷಗಳ ಕಾಲ ಸುಮ್ಮನಿದ್ದು, ಈಗ ಮರು ತನಿಖೆಗೆ ಆಗ್ರಹಿಸುತ್ತಿದ್ದೀರಿ, ಈಗ ಸಾಕ್ಷ್ಯಗಳನ್ನು ಎಲ್ಲಿಂದ ತರುತ್ತೀರಿ ಎಂದು ಪ್ರಶ್ನಿಸಿದ್ದಾರೆ.