ಅಕ್ರಮ ಹಣ ವರ್ಗಾವಣೆ ಪ್ರಕರಣ ಸಂಬಂಧ ಜಾರಿ ನಿರ್ದೇಶನಾಲಯ ಈ ಹಿಂದೆ ತನಿಖೆಗೆ ಹಾಜರಾಗುವಂತೆ ಹಲವು ಬಾರಿ ಶಾಗೆ ಸಮನ್ಸ್ ಜಾರಿ ಮಾಡಿದೆ. ಆದರೆ, ಇದಾವುದಕ್ಕೂ ಶಾ ಪ್ರತಿಕ್ರಿಯೆಗಳನ್ನು ನೀಡದ ಹಿನ್ನಲೆಯಲ್ಲಿ ದೆಹಲಿ ನ್ಯಾಯಾಲಯ ಶಾ ವಿರುದ್ಧ ಜಾಮೀನು ರಹಿತ ವಾರೆಂಟ್ ಜಾರಿ ಮಾಡಿತ್ತು. ಇದರಂತೆ ಕಳೆದ ರಾತ್ರಿ ಶಬ್ಬೀರ್ ಶಾನನ್ನು ಅಧಿಕಾರಿಗಳು ಬಂಧನಕ್ಕೊಳಪಡಿಸಿದ್ದಾರೆ.