ಪ್ರಕ್ರಿಯೆಗಳನ್ನು ಸರಳೀಕರಣಗೊಳಿಸುವ ದೃಷ್ಟಿಯಿಂದ ಕೇಂದ್ರ ಸರ್ಕಾರ ಎಲ್ಲಾ ರಾಜ್ಯಗಳಿಗೂ ಇಂತಹದ್ದೊಂದು ಸಲಹೆಯನ್ನು ಕಳಿಸಿದೆ ಎಂದು ಸಿಬ್ಬಂದಿ ನೇಮಕಾತಿ ಸಚಿವಾಲಯದ ರಾಜ್ಯ ಖಾತೆ ಸಚಿವ ಜಿತೇಂದ್ರ ಸಿಂಗ್ ರಾಜ್ಯಸಭೆಗೆ ಲಿಖಿತ ಉತ್ತರ ನೀಡಿದ್ದಾರೆ. ದಾಖಲೆಗಳಿಗೆ ಸಂಬಂಧಿಸಿದಂತೆ ಗಝೆಟೆಡ್ ಅಫಿಡವಿಟ್ ಪಡೆಯುವ ಬದಲು ಸ್ವಯಂ ದೃಢೀಕರಣ ನೀಡುವ ಪ್ರಕ್ರಿಯೆಯನ್ನು ಉತ್ತೇಜಿಸಲು ಕೇಂದ್ರ ಸರ್ಕಾರ ಈ ಕ್ರಮ ಕೈಗೊಂಡಿರುವುದಾಗಿ ಜಿತೇಂದ್ರ ಸಿಂಗ್ ತಿಳಿಸಿದ್ದಾರೆ.