ಬಿಹಾರದಲ್ಲಿ ಮಹಾಮೈತ್ರಿ ಒಡೆಯಲು ಕಾಂಗ್ರೆಸ್-ಆರ್ಜೆಡಿ ಕಾರಣ: ಸುಶೀಲ್ ಕುಮಾರ್ ಮೋದಿ

ಬಿಹಾರದ ಉಪ ಮುಖ್ಯಮಂತ್ರಿ ಸುಶೀಲ್ ಕುಮಾರ್ ಮೋದಿ ಅವರು ಬಿಹಾರದಲ್ಲಿ ಮಹಾಮೈತ್ರಿ ಒಡೆಯಲು ಕಾಂಗ್ರೆಸ್ ಮತ್ತು ಆರ್ಜೆಡಿ ಕಾರಣ ಎಂದು ಹೇಳಿದ್ದಾರೆ...
ಸುಶೀಲ್ ಕುಮಾರ್
ಸುಶೀಲ್ ಕುಮಾರ್
Updated on
ಪಾಟ್ನಾ: ಬಿಹಾರದ ಉಪ ಮುಖ್ಯಮಂತ್ರಿ ಸುಶೀಲ್ ಕುಮಾರ್ ಮೋದಿ ಅವರು ಬಿಹಾರದಲ್ಲಿ ಮಹಾಮೈತ್ರಿ ಒಡೆಯಲು ಕಾಂಗ್ರೆಸ್ ಮತ್ತು ಆರ್ಜೆಡಿ ಕಾರಣ ಎಂದು ಹೇಳಿದ್ದಾರೆ. 
ಜಾತ್ಯಾತೀತ ಜನತಾದಳ(ಜೆಡಿಯು) ಮತ್ತು ರಾಷ್ಟ್ರೀಯ ಜನತಾದಳ(ಆರ್ಜೆಡಿ) ಮೈತ್ರಿ ಮಾಡಿಕೊಂಡು ಬಿಹಾರದಲ್ಲಿ ಸರ್ಕಾರ ರಚಿಸಿದ್ದವು. ಆದರೆ ಕಾಂಗ್ರೆಸ್ ಮತ್ತು ಆರ್ಜೆಡಿಯಿಂದಾಗಿ ಇಂದು ಮಹಾಮೈತ್ರಿ ಒಡೆದಿದೆ ಎಂದರು. 
ಆರ್ಜೆಡಿಯಿಂದ ಹೊರಬಂದಿರುವ ಜೆಡಿಯು ಮುಖ್ಯಸ್ಥ ನಿತೀಶ್ ಕುಮಾರ್ ಅವರು ಬಿಜೆಪಿ ಜತೆಗೂಡಿ ನೂತನ ಸರ್ಕಾರ ರಚಿಸಿದ್ದಾರೆ. ಈ ವೇಳೆ ಬಿಹಾರ ಮುಖ್ಯಮಂತ್ರಿಯಾಗಿ ನಿತೀಶ್ ಕುಮಾರ್ ಮತ್ತು ಉಪ ಮುಖ್ಯಮಂತ್ರಿಯಾಗಿ ಸುಶೀಲ್ ಕುಮಾರ್ ಮೋದಿ ಅವರು ಪ್ರಮಾಣ ವಚನ ಸ್ವೀಕರಿಸಿದರು. 
ಬಳಿಕ ಮಾತನಾಡಿದ ಸುಶೀಲ್ ಕುಮಾರ್ ಮೋದಿ ಅವರು ಬಿಹಾರಕ್ಕೆ ಒಳ್ಳೆಯ ದಿನಗಳು ಬಂದಿವೆ. ರಾಜ್ಯದ ಅಭಿವೃದ್ಧಿಯೇ ಬಿಹಾರದ ನೂತನ ಸರ್ಕಾರದ ಮುಖ್ಯ ಉದ್ದೇಶ ಎಂದು ಹೇಳಿದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com