ಪತ್ನಿ ಜೊತೆಗೆ ವಿಕ್ರಮ್ ಗೌಡ್ (ಸಂಗ್ರಹ ಚಿತ್ರ)
ದೇಶ
ಹೈದರಾಬಾದ್: ಕಾಂಗ್ರೆಸ್ ನಾಯಕ ಮುಕೇಶ್ ಗೌಡ್ ಪುತ್ರ ಮೇಲೆ ಗುಂಡಿನ ದಾಳಿ
ಕಾಂಗ್ರೆಸ್ ನಾಯಕ ಮೂಲ ಮುಕೇಶ್ ಗೌಡ್ ಅವರ ಪುತ್ರ ವಿಕ್ರಮ್ ಗೌಡ್ ಅವರ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿರುವ ಘಟನೆ ಶುಕ್ರವಾರ ಬೆಳಗಿನ ಜಾವ ನಡೆದಿದೆ...
ಹೈದರಾಬಾದ್: ಕಾಂಗ್ರೆಸ್ ನಾಯಕ ಮೂಲ ಮುಕೇಶ್ ಗೌಡ್ ಅವರ ಪುತ್ರ ವಿಕ್ರಮ್ ಗೌಡ್ ಅವರ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿರುವ ಘಟನೆ ಶುಕ್ರವಾರ ಬೆಳಗಿನ ಜಾವ ನಡೆದಿದೆ.
ಹೈದರಾಬಾದ್'ನ ಬಂಜಾರಾ ಹಿಲ್ಸ್ ನಲ್ಲಿರುವ ಸ್ವಗೃಹದ ಬಳಿ ವಿಕ್ರಮ ಗೌಡ್ ಅವರ ಮೇಲೆ ಗುಂಡಿನ ದಾಳಿ ನಡೆದಿದ್ದು, ತೀವ್ರವಾಗಿ ಗಾಯಗೊಂಡಿರುವ ವಿಕ್ರಮ್ ಅವರನ್ನು ಅಪೋಲೋ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ತಿಳಿದುಬಂದಿದೆ.
ಗುಂಡಿನ ದಾಳಿಯಲ್ಲಿ ವಿಕ್ರಮ್ ಅವರ ಭುಜ, ಹೊಟ್ಟೆ ಹಾಗೂ ಬೆನ್ನಿಗೆ ಗಂಭೀರವಾಗಿ ಗಾಯಗಳಾಗಿದ್ದು, ಪ್ರಸ್ತುತ ಪ್ರಾಣಾಪಾಯದಿಂದ ಪಾರಾಗಿದ್ದಾರೆಂದು ಮೂಲಗಳಿಂದ ತಿಳಿದುಬಂದಿದೆ. ಪ್ರಕರಣ ದಾಖಲಿಸಿಕೊಂಡಿರುವ ಹೈದರಾಬಾದ್ ಪೊಲೀಸರು ತನಿಖೆ ಆರಂಭಿಸಿದ್ದಾರೆ.
Follow KannadaPrabha channel on WhatsApp
KannadaPrabha News app ಡೌನ್ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ