ಆರಂಭದಲ್ಲಿ ದೇಶದಲ್ಲಿ 21 ರಾಷ್ಟ್ರೀಯ ಹೆದ್ದಾರಿಗಳನ್ನು ವಾಯುನೆಲೆಯಾಗಿ ಅಭಿವೃದ್ಧಿಪಡಿಸಲು ಪ್ರಸ್ತಾವನೆ ಸಲ್ಲಿಸಲಾಗಿತ್ತು. ಅವುಗಳಲ್ಲಿ ಸದ್ಯ 12 ರಾಷ್ಟ್ರೀಯ ಹೆದ್ದಾರಿಗಳಿಗೆ ಅನುಮೋದನೆ ನೀಡಲಾಗಿದೆ. ಮೂರು ಹೆದ್ದಾರಿಗಳು ಮಾವೋವಾದಿ ಪೀಡಿತ ಪ್ರದೇಶಗಳಾದ ಒಡಿಶಾ, ಜಾರ್ಖಂಡ್ ಮತ್ತು ಛತ್ತೀಸ್ ಗಢವನ್ನು ಸಂಪರ್ಕಿಸುತ್ತದೆ. ಈ ಪ್ರದೇಶಗಳು ನೆರೆ, ಪ್ರವಾಹಗಳಿಗೂ ಆಗಾಗ ಸಿಲುಕುತ್ತಿರುತ್ತವೆ.