ಕಣಿವೆ ರಾಜ್ಯ ಕಾಶ್ಮೀರದಲ್ಲಿ ಭಾರತೀಯ ಸೇನೆ ನಡೆಸುತ್ತಿರುವ ಉಗ್ರ ನಿಗ್ರಹ ಕಾರ್ಯಾಚರಣೆಗೆ ಮಂಗಳವಾರ ಮಹತ್ವದ ಯಶಸ್ಸು ದೊರೆತಿದ್ದು, ಹಲವು ವರ್ಷಗಳಿಂದ ಸೇನೆಗೆ ಚಳ್ಳೆ ಹಣ್ಣು ತಿನ್ನಿಸಿ ಯುವಕರನ್ನು ಉಗ್ರ ಸಂಘಟನೆಗೆ ಸೆಳೆಯುತ್ತಿದ್ದ ಲಷ್ಕರ್ ಉಗ್ರ ಅಬು ದುಜಾನಾನನ್ನು ಭಾರತೀಯ ಸೇನಾ ಪಡೆ ಗುಂಡಿಕ್ಕಿ ಹತ್ಯೆ ಮಾಡಿದೆ.