ಇದಕ್ಕೂ ಮುನ್ನ ಇಂದು ಭಾರತೀಯ ಜನತಾ ಪಾರ್ಟಿಯ ಮುಖ್ಯಸ್ಥ ಅಮಿತ್ ಶಾ ಸಂಸತ್ ಕಲಾಪಕ್ಕೆ ಗೈರು ಹಾಜರಾಗುವ ಸಂಸದರನ್ನು ತೀವ್ರ ತರಾಟೆಗೆ ತೆಗೆದುಕೊಂಡಿದ್ದರು. ಬಿಜೆಪಿ ಸಂಸದೀಯ ಸಭೆ ನಂತರ ಮಾಧ್ಯಮವನ್ನುದ್ದೇಶಿಸಿ ಮಾತನಾಡಿದ ಸಚಿವ ಅನಂತ್ ಕುಮಾರ್, ಪಕ್ಷ ವಿಪ್ ಜಾರಿ ಮಾಡಿದಾಗ ಅದನ್ನು ಸಂಸದರು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಅಮಿತ್ ಶಾ ಹೇಳಿದ್ದಾರೆ. ಪಕ್ಷ ಈ ವಿಷಯವನ್ನು ಗಂಭೀರವಾಗಿ ತೆಗೆದುಕೊಂಡಿದ್ದು, ಪಕ್ಷದ ಸಂಸದರು ಇದನ್ನು ಪುನರಾವರ್ತಿಸಬಾರದು ಎಂದು ಅಮಿತ್ ಶಾ ಎಚ್ಚರಿಕೆ ನೀಡಿದ್ದಾರೆ ಎಂದರು.