2016 ರ ಆರ್ಥಿಕ ವರ್ಷದ ಮಧ್ಯಭಾಗದಲ್ಲಿ ದೇಶದ ಆರ್ಥಿಕತೆ ಕುಸಿಯುತ್ತಿತ್ತು. ಈ ಬಗ್ಗೆ ಎಚ್ಚರ ವಹಿಸುವಂತೆ ಸರ್ಕಾರಕ್ಕೆ ನಾವು ಸಲಹೆ ನೀಡಿದ್ದೆವು. ಆದರೆ ಕೇಂದ್ರ ಸರ್ಕಾರ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳುವ ಬದಲು ಗರಿಷ್ಠ ಮೊತ್ತದ ನೋಟುಗಳನ್ನು ನಿಷೇಧಿಸಿತು. ಯಾವುದೇ ಮುನ್ಸೂಚನೆ ಇಲ್ಲದೇ 500, 1000 ರೂ ನೋಟುಗಳನ್ನು ನಿಷೇಧಿಸಿದ್ದರ ಪರಿಣಾಮ 14.5-15 ಲಕ್ಷ ಕೋಟಿ ಹಣ ಹಣಕಾಸು ವಹಿವಾಟು ವ್ಯವಸ್ಥೆಯಿಂದ ಹಿಂದಕ್ಕೆಳೆಯಲ್ಪಟ್ಟಿತು. ಅಷ್ಟೇ ಅಲ್ಲದೇ ಕೇಂದ್ರ ಸರ್ಕಾರ ಮನಮೋಹನ್ ಸಿಂಗ್ ಅವರು ನೀಡಿದ ಸಲಹೆಯನ್ನು ತಿರಸ್ಕರಿಸಿ ಟೀಕಿಸಲಾಯಿತು ಎಂದು ಚಿದಂಬರಂ ಅಸಮಾಧಾನ ವ್ಯಕ್ತಪಡಿಸಿದ್ದಾರೆ.