ತೆಲಂಗಾಣ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಕುಸಿದು ಬಿದ್ದ ಉಪ ಮುಖ್ಯಮಂತ್ರಿ ಕಡಿಯಾಂ ಶ್ರೀಹರಿ

ತೆಲಂಗಾಣ ಉಪ ಮುಖ್ಯಮಂತ್ರಿ ಕಡಿಯಾಂ ಶ್ರೀಹರಿ ಅವರು ತೆಲಂಗಾಣದ ಮೂರನೇ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ತಮ್ಮ....
ತೆಲಂಗಾಣ ಮುಖ್ಯಮಂತ್ರಿಯೊಂದಿಗೆ ಕಡಿಯಾಂ ಶ್ರೀಹರಿ
ತೆಲಂಗಾಣ ಮುಖ್ಯಮಂತ್ರಿಯೊಂದಿಗೆ ಕಡಿಯಾಂ ಶ್ರೀಹರಿ
Updated on
ವಾರಂಗಲ್: ತೆಲಂಗಾಣ ಉಪ ಮುಖ್ಯಮಂತ್ರಿ ಕಡಿಯಾಂ ಶ್ರೀಹರಿ ಅವರು ತೆಲಂಗಾಣದ ಮೂರನೇ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ತಮ್ಮ ಸರ್ಕಾರದ ಅಭಿವೃದ್ಧಿಗೆ ಸಂಬಂಧಿಸಿದ ವರದಿ ಓದುತ್ತಿದ್ದ ವೇಳೆಯೇ ಕುಸಿದುಬಿದ್ದ ಘಟನೆ ಶುಕ್ರವಾರ ನಡೆದಿದೆ.
ಇಂದು ವಾರಂಗಲ್ ನ ಪೊಲೀಸ್ ಪರೇಡ್ ಮೈದಾನದಲ್ಲಿ ಮೂರನೇ ರಾಜ್ಯೋತ್ಸವ ಕಾರ್ಯಕ್ರಮ ಆಯೋಜಿಸಲಾಗಿತ್ತು. ಗೌರವ ವಂದನೆ ಸ್ಪೀಕರಿಸಿದ ಬಳಿಕ ಭಾಷಣ ಮಾಡುತ್ತಿದ್ದ ವೇಳೆ ಕಡಿಯಾಂ ಶ್ರೀಹರಿ ಅವರು ದಿಢೀರ್ ಕುಸಿದು ಬಿದ್ದಿದ್ದು, ಭದ್ರತಾ ಸಿಬ್ಬಂದಿ ಕೂಡಲೇ ಅವರನ್ನು ಅವರ ಕಾರಿಗೆ ಶಿಫ್ಟ್ ಮಾಡಿದ್ದಾರೆ.
ಸ್ಥಳದಲ್ಲಿದ್ದ ವೈದ್ಯರು ಉಪ ಮುಖ್ಯಮಂತ್ರಿಗಳಿಗೆ ಪ್ರಾಥಮಿಕ ಚಿಕಿತ್ಸೆ ನೀಡಿದ್ದು, ಬಿಸಿಲಿನ ತಾಪದಿಂದಾಗಿ ತೀವ್ರ ಅಸ್ವಸ್ಥಗೊಂಡಿದ್ದಾರೆ ಎಂದು ತಿಳಿಸಿದ್ದಾರೆ. ಕಡಿಯಾಂ ಶ್ರೀಹರಿ ಅವರು ಕೆಲ ನಿಮಿಷ ವಿಶ್ರಾಂತಿ ಪಡೆದು ಬಳಿಕ ತಮ್ಮ ಭಾಷಣ ಮುಂದುವರೆಸಿದರು 
ತೀವ್ರ ಬಿಸಿಲಿನ ತಾಪದಿಂದಾಗಿ ಉಪ ಮುಖ್ಯಮಂತ್ರಿಗಳು ಮೂರ್ಛೆಹೋಗಿದ್ದರು ಎಂದು ವೈದ್ಯರು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com