ಪಶ್ಚಿಮ ಬಂಗಾಳದಲ್ಲಿ ಗುಂಪು ಘರ್ಷಣೆ: ಓರ್ವ ಟಿಎಂಸಿ ಕಾರ್ಯಕರ್ತ ಸಾವು

ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯಲ್ಲಿ ಶನಿವಾರ ಎರಡು ಗುಂಪುಗಳ ನಡುವೆ ಸಂಭವಿಸಿದ ಘರ್ಷಣೆಯಲ್ಲಿ ಓರ್ವ....
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on
ಬರ್ಸಾತ್: ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯಲ್ಲಿ ಶನಿವಾರ ಎರಡು ಗುಂಪುಗಳ ನಡುವೆ ಸಂಭವಿಸಿದ ಘರ್ಷಣೆಯಲ್ಲಿ ಓರ್ವ ಟಿಎಂಸಿ ಕಾರ್ಯಕರ್ತ ಸ್ಥಳದಲ್ಲೇ ಮೃತಪಟ್ಟಿದ್ದು, ಇತರೆ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಸಂದೇಶಖಾಲಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗುಂಪು ಘರ್ಷಣೆ ಸಂಭವಿಸಿದ್ದು, ಎರಡು ಗುಂಪಿನವರು ಪಿಸ್ತೂಲ್, ಬಾಂಬ್ ಮತ್ತು ಲಾಠಿಯನ್ನು ಬಳಸಿ ಬಡಿದಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಮೃತಪಟ್ಟ ಟಿಎಂಸಿ ಕಾರ್ಯಕರ್ತನನ್ನು ಮೋಯಿನ್ ಮೊಲ್ಹಾ ಎಂದು ಗುರುತಿಸಲಾಗಿದ್ದು, ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅವರು ಹೇಳಿದ್ದಾರೆ.
ಈ ಹಿಂಸಾಚಾರ ಘಟನೆಗೆ ಬಿಜೆಪಿಯೇ ಕಾರಣ ಎಂದು ತೃಣಮೂಲ ಕಾಂಗ್ರೆಸ್ ಸಂಸದ ಇದ್ರಿಸ್ ಅಲಿ ಅವರು ಆರೋಪಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com