ಅನುರಾಗ್ ಅವರಿಗೆ ಸಂಬಂಧಿಸಿದ ಕೆಲ ಪೇಪರ್ಸ್ ಗಳನ್ನು ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದು, ಅನುರಾಗ್ ಅವರು ಬ್ರಾಂಕೈಟಿಸ್ (ಗಂಟಲೂತ, ಶ್ವಾಸನಾಳದ ರೋಗ) ರೋಗದಿಂದ ಬಳಲುತ್ತಿರುವುದು ಈ ವೇಳೆ ತಿಳಿದುಬಂದಿದೆ. ಅಲ್ಲದೆ, ಬೆಂಗಳೂರಿನಲ್ಲಿ ಕೆಲಸ ಮಾಡಲು ಅತೃಪ್ತಿಗೊಂಡಿದ್ದ ಅನುರಾಗ್ ತಿವಾರಿಯವರು, ಕರ್ನಾಟಕ ಕ್ಯಾಡರ್ ಗೆ ಸ್ಥಳಾಂತರಗೊಳ್ಳಲು ಬಯಸಿದ್ದರು ಎಂಬ ಸತ್ಯ ವಿಚಾರಣೆ ವೇಳೆ ಬಹಿರಂಗಗೊಂಡಿದೆ.