ಕೇಂದ್ರ ಸಚಿವೆ ಮನೇಕಾ ಗಾಂಧಿ
ಕೇಂದ್ರ ಸಚಿವೆ ಮನೇಕಾ ಗಾಂಧಿ

ಮೂತ್ರಪಿಂಡದಲ್ಲಿ ಕಲ್ಲು: ಶಸ್ತ್ರಚಿಕಿತ್ಸೆಗೊಳಗಾದ ಸಚಿವೆ ಮನೇಕಾ ಗಾಂಧಿ

ಮೂತ್ರ ಪಿಂಡದಲ್ಲಿ ಕಲ್ಲು ಪತ್ತೆಯಾದ ಹಿನ್ನಲೆಯಲ್ಲಿ ಕೇಂದ್ರ ಸಚಿವೆ ಮನೇಕಾ ಗಾಂಧಿಯವರು ಏಮ್ಸ್ ಆಸ್ಪತ್ರೆಯಲ್ಲಿ ಭಾನುವಾರ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ...
ನವದೆಹಲಿ: ಮೂತ್ರ ಪಿಂಡದಲ್ಲಿ ಕಲ್ಲು ಪತ್ತೆಯಾದ ಹಿನ್ನಲೆಯಲ್ಲಿ ಕೇಂದ್ರ ಸಚಿವೆ ಮನೇಕಾ ಗಾಂಧಿಯವರು ಏಮ್ಸ್ ಆಸ್ಪತ್ರೆಯಲ್ಲಿ ಭಾನುವಾರ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ. 
ತಮ್ಮ ಕ್ಷೇತ್ರ ಫಿಲಿಭಿತ್ ಗೆ ಭೇಟಿ ನೀಡಿದ ಸಂದರ್ಭದಲ್ಲಿ ಮನೇಕಾ ಗಾಂಧಿಯವರಿಗೆ ಅತೀವ ಹೊಟ್ಟೆ ನೋವು ಕಾಣಿಸಿಕೊಂಡಿದೆ. ನಂತರ ಮನೇಕಾ ಅವರನ್ನು ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. 
ಸ್ಕ್ಯಾನಿಂಗ್ ನಲ್ಲಿ ಮನೇಕಾ ಅವರ ಮೂತ್ರಪಿಂಡದಲ್ಲಿ ಕಲ್ಲು ಬೆಳೆದಿರುವುದು ಪತ್ತೆಯಾಗಿತ್ತು. ಕಲ್ಲು ದೊಡ್ಡದಾಗಿದ್ದರಿಂದ ವೈದ್ಯರು ನಿನ್ನೆ ಮನೇಕಾ ಅವರಿಗೆ ಶಸ್ತ್ರಚಿಕಿತ್ಸೆ ಮಾಡಿದ್ದಾರೆ. ಇದೀಗ ಮನೇಕಾ ಅವರು ಚೇತರಿಸಿಕೊಳ್ಳುತ್ತಿದ್ದು ಇನ್ನು 3-4 ದಿನಗಳಲ್ಲಿ ಆಸ್ಪತ್ರೆಯಿಂದ ಆಸ್ಪತ್ರೆಯಿಂದ ಬಿಡುಗಡೆಗೊಳ್ಳಲಿದ್ದಾರೆಂದು ತಿಳಿದುಬಂದಿದೆ. 

Related Stories

No stories found.

Advertisement

X
Kannada Prabha
www.kannadaprabha.com