ದೇಶ ಇಂದು ವಿಶ್ವದ ಪ್ರಮುಖ ಆರ್ಥಿಕ ಶಕ್ತಿಯಾಗಿ ಹೊರಹೊಮ್ಮಿದೆ. ಆದರೆ ಸಾಮಾನ್ಯ ಜನರ ಅಭಿವೃದ್ಧಿಯಾಗಿಲ್ಲ ಎಂದು ತಿವಾರಿ ಹೇಳಿದ್ದಾರೆ. ಸಾಲ ಇಲ್ಲದ ರೈತ ಈ ದೇಶದಲ್ಲಿ ಕಾಣಸಿಗುವುದಿಲ್ಲ. ರೈತರು ಬೆಳೆದ ಬೆಳೆಗಳನ್ನು ರಸ್ತೆಯಲ್ಲಿ ಎಸೆಯುವ ಸ್ಥಿತಿ ನಿರ್ಮಾಣವಾಗಿದೆ. ನಿರುದ್ಯೋಗ ಸಮಸ್ಯೆ ಹೆಚ್ಚುತ್ತಿದೆ. ದೇಶ ಈಗ ಕೇಂದ್ರಿತ ಬಂಡವಾಳಶಾಹಿಗಳ ಕೈಯಲ್ಲಿದೆ ಎಂದು ಬಿಜೆಪಿ ಶಾಸಕ ಹೇಳಿದ್ದಾರೆ.