ಇಂದು ಮಧ್ಯಾಹ್ನ 3 ಗಂಟೆಯ ಸುಮಾರಿಗೆ ಜಿಲ್ಲಾ ಕೇಂದ್ರದಿಂದ ಸುಮಾರು 10 ಕಿ.ಮೀ.ದೂರದಲ್ಲಿರುವ ಕೋಟ್ವಲಿ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಈ ಅಗ್ನಿ ದುರಂತ ಸಂಭವಿಸಿದ್ದು, ಘಟನೆಗೆ ನಿಖರ ಕಾರಣ ಇನ್ನೂ ತಿಳಿದು ಬಂದಿಲ್ಲ. ಆದರೆ, ಪಟಾಕಿಗಳ ದಾಸ್ತಾನು ಇರಿಸಿದ್ದ ಸ್ಥಳದಲ್ಲಿ ಯಾರೋ ಬೀಡಿ ಸೇದಿ ಎಸೆದು ಹೋಗಿದು ಅಗ್ನಿ ದುರಂತಕ್ಕೆ ಕಾರಣ ಎಂಬುದು ಪ್ರಾಥಮಿಕ ತನಿಖೆಯಿಂದ ಗೊತ್ತಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.