ನೌಗಾಮ್ ಬಳಿ ಗಡಿ ಸುಸುಳಲು ಯತ್ನ: 3 ಉಗ್ರರನ್ನು ಹೊಡೆದುರುಳಿಸಿದ ಸೇನೆ, ಓರ್ವ ಯೋಧ ಹುತಾತ್ಮ

ಜಮ್ಮು ಮತ್ತು ಕಾಶ್ಮೀರದ ನೌಗಾಮ್ ಸೆಕ್ಟರ್ ಬಳಿಯಿರುವ ಗಡಿ ನಿಯಂತ್ರಣ ರೇಖೆ ಬಳಿ ಗಡಿ ನುಸುಳಲು ಯತ್ನಿಸುತ್ತಿದ್ದ ಮೂವರು ಉಗ್ರರನ್ನು ಭಾರತೀಯ ಸೇನೆ ಹೊಡೆದುರುಳಿಸಿದೆ...
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
ನೌಗಾಮ್: ಜಮ್ಮು ಮತ್ತು ಕಾಶ್ಮೀರದ ನೌಗಾಮ್ ಸೆಕ್ಟರ್ ಬಳಿಯಿರುವ ಗಡಿ ನಿಯಂತ್ರಣ ರೇಖೆ ಬಳಿ ಗಡಿ ನುಸುಳಲು ಯತ್ನಿಸುತ್ತಿದ್ದ ಮೂವರು ಉಗ್ರರನ್ನು ಭಾರತೀಯ ಸೇನೆ ಹೊಡೆದುರುಳಿಸಿದೆ. 
ಇಂದು ಬೆಳಿಗ್ಗೆ ಗಡಿ ನಿಯಂತ್ರಣ ರೇಖೆ ಬಳಿ ಬಂದಿರುವ ಉಗ್ರರು ಗಡಿ ನುಸುಳಲು ಯತ್ನ ನಡೆಸಿದ್ದಾರೆ. ಈ ವೇಳೆ ಗಸ್ತು ತಿರುಗುತ್ತಿದ್ದ ಸೇನಾ ಪಡೆ ಮೂವರು ಉಗ್ರರನ್ನು ಹತ್ಯೆ ಮಾಡಿದೆ. ಗುಂಡಿನ ಚಕಮಕಿ ವೇಳೆ ಓರ್ವ ಹುತಾತ್ಮನಾಗಿದ್ದಾನೆಂದು ಮೂಲಗಳು ತಿಳಿಸಿವೆ. 
ಬಾರಾಮುಲ್ಲಾದಲ್ಲಿ ಎನ್'ಕೌಂಟರ್: ಇಬ್ಬರು ಯೋಧರಿಗೆ ಗಾಯ
ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾದಲ್ಲಿ ಭಾರತೀಯ ಸೇನೆ ಎನ್ ಕೌಂಟರ್ ನಡೆಸಿದ್ದು, ಇಬ್ಬರು ಯೋಧರಿಗೆ ಗಾಯಗಳಾಗಿರುವುದಾಗಿ ತಿಳಿದುಬಂದಿದೆ. 
ಬಾರಾಮುಲ್ಲಾ-ಉರಿ ಸೆಕ್ಟರ್ ಬಳಿಯ ದೊಬಾ ಸರ್ದಾರ್ ಪ್ರದೇಶದಲ್ಲಿನ ಗಡಿ ನಿಯಂತ್ರಣ ರೇಖೆ ಬಳಿ 6 ಉಗ್ರರು ಅಡಗಿ ಕುಳಿತಿರುವುದಾಗಿ ಗುಪ್ತಚರ ಇಲಾಖೆ ಮಾಹಿತಿ ನೀಡಿದ ಹಿನ್ನಲೆಯಲ್ಲಿ ಸೇನಾ ಪಡೆ ಕಾರ್ಯಾಚರಣೆಗಿಳಿದಿತ್ತು. 
ಸೇನೆ ಕಾರ್ಯಾಚರಣೆ ಆರಂಭಿಸುತ್ತಿದ್ದಂತೆಯೇ ಉಗ್ರರು ಯೋಧರ ಮೇಲೆ ಏಕಾಏಕಿ ಗುಂಡಿನ ದಾಳಿ ನಡೆಸಿದ್ದಾರೆ. ಈ ವೇಳೆ ಇಬ್ಬರು ಯೋಧರು ಗಾಯಗೊಂಡಿದ್ದಾರೆಂದು ತಿಳಿದುಬಂದಿದೆ. 
ಗಾಯಗೊಂಡ ಯೋಧರನ್ನು ವಿಜಯ್ ಶರ್ಮಾ ಮತ್ತು ಫಿರಾಸತ್ ಅಲಿ ಎಂದು ಗುರ್ತಿಸಲಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 
ಗಡಿ ನಿಯಂತ್ರಣ ರೇಖೆ ಬಳಿಯಿರುವ ಅರಣ್ಯ ಪ್ರದೇಶದಲ್ಲಿ ಉಗ್ರರು ಅಡಗಿ ಕುಳಿತಿದ್ದು, ಉಗ್ರರು ಇರುವುದಕ್ಕೆ ಸಾಕ್ಷಿಯೆಂಬಂತೆ ಸ್ಥಳದಲ್ಲಿ 6 ಬ್ಯಾಗ್ ಗಳು ಪತ್ತೆಯಾಗಿವೆ. ಆದರೆ, ಬ್ಯಾಗ್ ನಲ್ಲಿ ಇರುವ ವಸ್ತುಗಳ ಕುರಿತಂತೆ ಯಾವುದೇ ಮಾಹಿತಿಗಳು ಬಹಿರಂಗಗೊಂಡಿಲ್ಲ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com