ಕರ್ಮಲ್ ಪೊಲೀಸ್ ಠಾಣೆಯ ಪೊಲೀಸರ ಪ್ರಕಾರ, ಜಾಧವ್ ಅವರು ತಮ್ಮ ಗೆಳೆಯರಿಗೆ ಮತ್ತು ಸಂಬಂಧಿಕರಿಗೆ ಬರೆದ ಪತ್ರ ಪತ್ತೆಯಾಗಿದ್ದು, ಅದರಲ್ಲಿ 'ನಾನು ಒಬ್ಬ ರೈತ, ಧಾನಾಜಿ ಚಂದ್ರಕಾಂತ್ ಜಾಧವ್. ಇಂದು ನಾನು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ. ದಯವಿಟ್ಟು ನನ್ನ ಶವವನ್ನು ಗ್ರಾಮಕ್ಕೆ ತೆಗೆದುಕೊಂಡು ಹೋಗಿ. ಆದರೆ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರು ಇಲ್ಲಿಗೆ ಬಂದು ರೈತರ ಬೇಡಿಕೆ ಈಡೇರಿಸುವವರೆಗೆ ನನ್ನ ಶವ ಸಂಸ್ಕಾರ ಮಾಡಬೇಡಿ' ಎಂದು ಬರೆದಿದ್ದಾರೆ.