ಮಂಡಸೌರ್ ರಾಹುಲ್ ಭೇಟಿಯೊಂದು 'ಪ್ರಚಾರ ತಂತ್ರ': ಬಿಜೆಪಿ

ಹಿಂಸಾಚಾರ ಪೀಡಿದ ಮಂಡಸೌರ್'ಗೆ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿಯವರು ಭೇಟಿ ನೀಡುತ್ತಿದ್ದು, ಭೇಟಿಯೊಂದು ಪ್ರಚಾರ ತಂತ್ರವಾಗಿದೆ ಎಂದು ಬಿಜೆಪಿ...
ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ
ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ
ಭೋಪಾಲ್: ಹಿಂಸಾಚಾರ ಪೀಡಿದ ಮಂಡಸೌರ್'ಗೆ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿಯವರು ಭೇಟಿ ನೀಡುತ್ತಿದ್ದು, ಭೇಟಿಯೊಂದು ಪ್ರಚಾರ ತಂತ್ರವಾಗಿದೆ ಎಂದು ಬಿಜೆಪಿ ಗುರುವಾರ ಹೇಳಿದೆ. 
ಬೆಳೆಗಳಿಗೆ ಸೂಕ್ತ ಬೆಲೆ, ಸಾಲ ಮನ್ನಾ ಸೇರಿದಂತೆ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಮಧ್ಯಪ್ರದೇಶದ ರೈತರು ಪ್ರತಿಭಟನೆ ನಡೆಸುತ್ತಿದ್ದರು. ಈ ವೇಳೆ ಘರ್ಷಣೆ ಏರ್ಪಟ್ಟ ಕಾರಣ ಪೊಲೀಸರು ಗೋಲಿಬಾರ್ ನಡೆಸಿದ್ದರು ಎಂದು ಹೇಳಲಾಗುತ್ತಿತ್ತು. ಇದಾದ ಬಳಿಕ ಘರ್ಷಣೆ ಹಿಂಸಾಚಾರಕ್ಕೆ ತಿರುಗಿ ಐವರು ರೈತರು ಮೃತಪಟ್ಟಿದ್ದರು. ನಿನ್ನೆ ಕೂಡ ರಾಜ್ಯ ಸರ್ಕಾರದ ಕ್ರಮ ವಿರೋಧಿಸಿ ತೀವ್ರವಾಗಿ ಪ್ರತಿಭಟನೆ ನಡೆಸಿದ್ದ ರೈತರು ಬಸ್ ಗಳಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದರು. 
ಮಧ್ಯಪ್ರದೇಶದಲ್ಲಿ ಪರಿಸ್ಥಿತಿ ಉದ್ವಿಗ್ನಗೊಂಡಿರುವ ಹಿನ್ನಲೆಯಲ್ಲಿ ಇಂದು ಮಂಡಸೌರ್ ಗೆ ಭೇಟಿ ನೀಡಿ ಮೃತ ರೈತರ ಕುಟುಂಬಸ್ಥರನ್ನು ಭೇಟಿ ಮಾಡುತ್ತೇನೆಂದು ರಾಹುಲ್ ಗಾಂಧಿಯವರು ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಹೇಳಿಕೊಂಡಿದ್ದರು. 
ರಾಹುಲ್ ಭೇಟಿ ನೀಡುತ್ತಿರುವ ಹಿನ್ನಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ಕೇಂದ್ರ ಸಚಿವ ನರೇಂದ್ರ ಸಿಂಗ್ ತೋಮರ್ ಅವರು, ಹಿಂಸಾಚಾರ ಪೀಡಿತ ಪ್ರದೇಶಕ್ಕೆ ರಾಹುಲ್ ಗಾಂಧಿಯವರು ಭೇಟಿ ನೀಡಲು ನಿರ್ಧರಿಸಿದ್ದಾರೆ. ಭೇಟಿ ನೀಡುವುದಕ್ಕೂ ಮುನ್ನ ರಾಹುಲ್ ಅವರು ಮೊದಲು ತಮ್ಮ ಜವಾಬ್ದಾರಿಯನ್ನು ಅರ್ಥ ಮಾಡಿಕೊಳ್ಳಬೇಕಿದೆ ಎಂದು ಹೇಳಿದ್ದಾರೆ. 
ಜವಾಬ್ದಾರಿ ಬಗ್ಗೆ ಮಾತನಾಡುವ ರಾಹುಲ್ ಅವರು ಇದೀಗ ತಾವೇ ಪ್ರಚಾರ ತಂತ್ರ ರೂಪಿಸಿ ಗಲಭೆ ಪೀಡಿತ ಪ್ರದೇಶಕ್ಕೆ ಭೇಟಿ ನೀಡುತ್ತಿದ್ದಾರೆಂದು ತಿಳಿಸಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com