ಕಜಕಿಸ್ತಾನದ ರಾಜಧಾನಿಯಾದ ಆಸ್ತಾನದಲ್ಲಿ ನಡೆಯುತ್ತಿರುವ ಶಾಂಘೈ ಒಕ್ಕೂಟ ಶೃಂಗಸಭೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಪಾಕಿಸ್ತಾನದ ಪ್ರಧಾನಮಂತ್ರಿ ನವಾಜ್ ಷರೀಫ್ ಪರಸ್ಪರ ಭೇಟಿಯಾಗಿ ಉಭಯ ಕುಶಲೋಪರಿ ನಡೆಸಿದ ಬಳಿಕ ಈ ಬೆಳವಣಿಗೆಗಳು ಕಂಡು ಬಂದಿದ್ದು, ಉಭಯ ದೇಶಗಳ ಜನರಲ್ಲಿ ಸಾಕಷ್ಟು ಕುತೂಹಲಗಳು ಮೂಡಿಸಿದೆ. ಪಾಕಿಸ್ತಾನದಲ್ಲಿರುವ ಭಾರತೀಯ ಕೈದಿಗಳಿಗು ಬಿಡುಗಡೆ ಭಾಗ್ಯ ಸಿಗುವ ನಿರೀಕ್ಷೆಗಳು ಇದೀಗ ವ್ಯಕ್ತವಾಗತೊಡಗಿವೆ.