ಈ ಕುರಿತು ರೈಲ್ವೆ ಸಚಿವ ಸುರೇಶ್ ಪ್ರಭು ಅವರು ತನಿಖೆಗೆ ಆದೇಶಿಸಿದ್ದಾರೆ. ಆದರೆ ಈ ಕುರಿತು ಎಎನ್ಐಗೆ ಪ್ರತಿಕ್ರಿಯಿಸಿರುವ ಸುವರ್ಣ ರಾಜ್ ಅವರು, ನನಗೆ ಯಾವುದೇ ತನಿಖೆ ಬೇಕಾಗಿಲ್ಲ ಮತ್ತು ಇದು ಸಮಸ್ಯೆಗೆ ಪರಿಹಾರವೂ ಅಲ್ಲ. ನಾನು ಸಚಿವರನ್ನು ಭೇಟಿ ಮಾಡಬೇಕು ಮತ್ತು ವಿಕಲಚೇತನರು ಎದುರಿಸುತ್ತಿರುವ ಸಮಸ್ಯೆಗಳನ್ನು ಅವರ ಗಮನಕ್ಕೆ ತರಬೇಕು ಎಂದಿದ್ದಾರೆ. ಅಲ್ಲದೆ ನಮ್ಮ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಬೇಕು ಎಂದು ಒತ್ತಾಯಿಸಿದ್ದಾರೆ.