ಮಹಾರಾಷ್ಟ್ರ ಸರ್ಕಾರ ಎಲ್ಲಾ ರೈತರ ಸಾಲ ಮನ್ನಾ ಮಾಡುವ ಕುರಿತು ನಿರ್ಧಾರ ಕೈಗೊಂಡ ಹಿನ್ನೆಲೆಯಲ್ಲಿ ನಿನ್ನೆ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಸಾಲ ಮನ್ನಾ ಮಾಡುವುದರಿಂದ ರಾಜ್ಯಗಳ ಮೇಲೆ ಉಂಟಾಗುವ ಆರ್ಥಿಕ ಹೊರೆಯಲ್ಲಿ ಕೇಂದ್ರ ಸರ್ಕಾರ ಪಾಲು ಹೊರುವುದಿಲ್ಲ. ಸಾಲ ಮನ್ನಾದ ಸಂಪೂರ್ಣ ವೆಚ್ಚವನ್ನು ಆಯಾ ರಾಜ್ಯ ಸರ್ಕಾರಗಳೇ ಭರಿಸಬೇಕು. ಕೇಂದ್ರ ಸರ್ಕಾರದ ಬೊಕ್ಕಸದಿಂದ ರೈತರ ಕೃಷಿ ಸಾಲ ಮನ್ನಾಕ್ಕೆ ಹಣ ಕೊಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.