ಕೇಂದ್ರದ ಎನ್'ಡಿಎ ಸರ್ಕಾರ ಅಧಿಕಾರಕ್ಕೆ ಬಂದು ಮೂರು ವರ್ಷ ಪೂರೈಸಿದ ಹಿನ್ನಲೆಯಲ್ಲಿ ಸಂಭ್ರಮಾಚರಣೆಯ ಅಂಗವಾಗಿ ನಿನ್ನೆ ಸಂಜೆ ಸಾರ್ವಜನಿಕ ಕಾರ್ಯಕ್ರಮವೊಂದನ್ನು ಆಯೋಜಿಸಲಾಗಿತ್ತು. ಈ ಕಾರ್ಯಕ್ರಮವನ್ನುದ್ದೇಶಿಸಿ ಸಚಿವೆ ಸ್ಮೃತಿ ಇರಾನಿ ಮಾತನಾಡುತ್ತಿದ್ದರು. ಈ ವೇಳೆ ಕಾರ್ಯಕ್ರಮಕ್ಕೆ ಬಂದಿದ್ದ ಕೇತನ್ ಕಸ್ವಾಲ್ ಎಂಬ ವ್ಯಕ್ತಿ ಇರಾನಿಯವರನ್ನು ಗುರಿಯಾಗಿರಿಸಿಕೊಂಡು ಏಕಾಏಕಿ ಬಳೆಗಳನ್ನು ಎಸೆದಿದ್ದಾರೆ.