ನವದೆಹಲಿ: 'ನನ್ನ ಅಜ್ಜಿ ಮತ್ತು ಕುಟುಂಬದೊಂದಿಗೆ ಸಮಯ ಕಳೆಯುವುದಕ್ಕಾಗಿ ಕೆಲ ದಿನ ನಾನು ವಿದೇಶಕ್ಕೆ ತೆರಳುತ್ತಿದ್ದೇನೆ' ಎಂದು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು ಮಂಗಳವಾರ ಟ್ವೀಟ್ ಮಾಡಿದ್ದರು.
ಈ ಹಿಂದೆಯೂ ಅಧಿವೇಶನದ ಸಂದರ್ಭದಲ್ಲಿ ವಿದೇಶ ಪ್ರವಾಸ ಕೈಗೊಂಡಿದ್ದ ರಾಹುಲ್ ಗಾಂಧಿ ಈಗ ಜುಲೈ ನಲ್ಲಿ ಸಂಸತ್ ಮುಂಗಾರು ಅಧಿವೇಶನ ಆರಂಭಕ್ಕು ಮುನ್ನವೇ ವಿದೇಶ ಪ್ರವಾಸ ಕೈಗೊಂಡಿದ್ದಾರೆ.
ನಿನ್ನೆಯಷ್ಟೇ ಬೆಂಗಳೂರಿನಲ್ಲಿ ಕಾಂಗ್ರೆಸ್ ಪಕ್ಷದ ಮುಖವಾಣಿ ಹಾಗೂ ಐತಿಹಾಸಿಕ ಪತ್ರಿಕೆ ನ್ಯಾಷನಲ್ ಹೆರಾಲ್ಡ್ ಮರು ಚಾಲನೆ ನೀಡಿದ್ದ ರಾಹುಲ್ ಗಾಂಧಿ ಅವರು ಇಂದು ದಿಢೀರ್ ಅಜ್ಜಿ ಭೇಟಿ ಮಾಡಲು ವಿದೇಶಕ್ಕೆ ತೆರಳುತ್ತಿರುವುದಾಗಿ ಟ್ವೀಟ್ ಮಾಡಿದ್ದಾರೆ.
ಕಳೆದ ವಾರ ಮಧ್ಯಪ್ರದೇಶದಲ್ಲಿ ಪೊಲೀಸರ ಗೋಲಿಬಾರ್ ನಲ್ಲಿ ಮೃತಪಟ್ಟ ರೈತರ ಕುಟುಂಭವನ್ನು ಭೇಟಿ ಮಾಡಲು ಯತ್ನಿಸಿದ್ದ ರಾಹುಲ್ ಗಾಂಧಿ ಅವರನ್ನು ಕೆಲಕಾಲ ಪೊಲೀಸರು ವಶಕ್ಕೆ ಪಡೆದಿದ್ದರು.