ಬೆಳೆಗಳಿಗೆ ಸೂಕ್ತ ಬೆಲೆ, ಸಾಲ ಮನ್ನಾ ಸೇರಿದಂತೆ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಮಧ್ಯಪ್ರದೇಶದ ರೈತರು ಪ್ರತಿಭಟನೆ ನಡೆಸುತ್ತಿದ್ದರು. ಈ ವೇಳೆ ಘರ್ಷಣೆ ಏರ್ಪಟ್ಟ ಕಾರಣ ಪೊಲೀಸರು ಗೋಲಿಬಾರ್ ನಡೆಸಿದ್ದರು. ಇದಾದ ಬಳಿಕ ಘರ್ಷಣೆ ಹಿಂಸಾಚಾರಕ್ಕೆ ತಿರುಗಿ ಐವರು ರೈತರು ಮೃತಪಟ್ಟಿದ್ದರು. ರಾಜ್ಯ ಸರ್ಕಾರದ ಈ ಕ್ರಮವನ್ನು ವಿರೋಧಿಸಿ ತೀವ್ರವಾಗಿ ಪ್ರತಿಭಟನೆ ನಡೆಸಿದ್ದ ರೈತರು ಬಸ್ ಗಳಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದರು. ಈ ಮೂಲಕ ಮಂಡಸೌರ್ ಪ್ರತಿಭಟನೆ ಉಗ್ರ ಸ್ವರೂಪ ಪಡೆದುಕೊಂಡಿತ್ತು.