ಹಿಮಾಚಲ ಪ್ರದೇಶ: ಕಣಿವೆಗೆ ಉರುಳಿದ ಖಾಸಗಿ ಬಸ್, 10 ಪ್ರವಾಸಿಗರು ಸಾವು

ಅಮೃತಸರದಿಂದ ಪ್ರವಾಸಕ್ಕೆ ಬಂದಿದ್ದ ಖಾಸಗಿ ಬಸ್ಸೊಂದು ಗುರುವಾರ ಹಿಮಾಚಲ ಪ್ರದೇಶದ ದಲಿರಾ ಸಮೀಪ ಕಣಿವೆಗೆ ಉರುಳಿಬಿದ್ದ....
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
ಧರ್ಮಸಾಲ: ಅಮೃತಸರದಿಂದ ಪ್ರವಾಸಕ್ಕೆ ಬಂದಿದ್ದ ಖಾಸಗಿ ಬಸ್ಸೊಂದು ಗುರುವಾರ ಹಿಮಾಚಲ ಪ್ರದೇಶದ ದಲಿರಾ ಸಮೀಪ ಕಣಿವೆಗೆ ಉರುಳಿಬಿದ್ದ ಪರಿಣಾಮ ಕನಿಷ್ಠ 10 ಮಂದಿ ಮೃತಪಟ್ಟಿದ್ದಾರೆ ಮತ್ತು 30ಕ್ಕು ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಧರ್ಮಸಾಲದಿಂದ ಸುಮಾರು 60 ಕಿ.ಮೀ.ದೂರದಲ್ಲಿ ಈ ಅಪಘಾತ ಸಂಭವಿಸಿದ್ದು, ಮೃತಪಟ್ಟವರ ಗುರುತು ಇನ್ನು ಪತ್ತೆಯಾಗಿಲ್ಲ ಎಂದು ಧರ್ಮಸಾಲ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಸ್ ಗಾಂಧಿ ಅವರು ತಿಳಿಸಿದ್ದಾರೆ.
ಅಪಘಾತದಲ್ಲಿ ಗಾಯಗೊಂಡವರನ್ನು ಕಂಗ್ರಾದಲ್ಲಿರುವ ಟಂಡಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com