ಈ ವಿಷಯವನ್ನು ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರೊಂದಿಗೆ ಚರ್ಚಿಸಿದ್ದು, ಅವರು ಬೇಡಿಕೆಯನ್ನು ಪರಿಶೀಲಿಸುವುದಾಗಿ ಭರವಸೆ ನೀಡಿದ್ದಾರೆ. ನಾವು ಬಾಂಬೆಯನ್ನು ಮುಂಬೈ ಎಂದು ಮರುನಾಮಕರಣ ಮಾಡಿದ್ದೇವೆ. ಮಲ್ಬಾರ್ ಹಿಲ್ ನ್ನು ವಾಲ್ಕೇಶ್ವರ್ ಹಾಗೂ ವಿಕ್ಟೋರಿಯಾ ಟರ್ಮಿನಸ್ ನ್ನು ಛತ್ರಪತಿ ಶಿವಾಜಿ ಮಹಾರಾಜ್ ಟರ್ಮಿನಸ್ ಎಂದು ಮರುನಾಮಕರಣ ಮಾಡಿದ್ದೇವೆ ಹಾಗಾದರೆ ಗೇಟ್ ವೇ ಆಫ್ ಇಂಡಿಯಾವನ್ನು ಭಾರತ್ ದ್ವಾರ್ ಎಂದು ಏಕೆ ಮರುನಾಮಕರಣ ಮಾಡಬಾರದು ಎಂದು ಬಿಜೆಪಿ ಶಾಸಕ ರಾಜ್ ಪುರೋಹಿತ್ ಪ್ರಶ್ನಿಸಿದ್ದಾರೆ.