ಇಂದು ದಿವಾಕರ್ ರೆಡ್ಡಿ ಅವರು ಇಂಡಿಗೋ ವಿಮಾನದಲ್ಲಿ ಹೈದರಬಾದ್ ಗೆ ಪ್ರಯಾಣಿಸಬೇಕಿತ್ತು. ಆದರೆ ವಿಮಾನ ನಿಲ್ದಾಣಕ್ಕೆ ತಡವಾಗಿ ಆಗಮಿಸಿದ್ದರಿಂದ ಬೋರ್ಡಿಂಗ್ ಪಾಸ್ ಕೌಂಟರ್ ಗಳನ್ನು ಬಂದ್ ಮಾಡಲಾಗಿತ್ತು. ಇದರಿಂದ ಆಕ್ರೋಶಗೊಂಡ ಸಂಸದರು ವಿಮಾನ ಸಿಬ್ಬಂದಿಯನ್ನು ತರಾಟೆಗೆದುಕೊಂಡು, ಬೋರ್ಡಿಂಗ್ ಪಾಸ್ ನೀಡುವಂತೆ ಒತ್ತಾಯಿಸಿದ್ದಾರೆ. ಆದರೆ ಇದಕ್ಕೆ ವಿಮಾನ ಸಿಬ್ಬಂದಿ ಒಪ್ಪದ ಹಿನ್ನೆಲೆಯಲ್ಲಿ ಇಬ್ಬರ ಮಧ್ಯ ಕೆಲಕಾಲ ಮಾತಿನ ಚಕಮಕಿ ನಡೆದಿರುವುದು ಸಿಸಿಟಿವಿಯಲ್ಲಿ ಸೆರೆಯಾಗಿದೆ.