ಡಾರ್ಜಿಲಿಂಗ್ ನಲ್ಲಿ ಭುಗಿಲೆದ್ದ ಹಿಂಸಾಚಾರ, ಐಆರ್ ಬಿ ಕಮಾಂಡೆಂಟ್ ಸೇರಿ ಮೂವರು ಸಾವು

ಗೂರ್ಖಾ ಜನಮುಕ್ತಿ ಮೋರ್ಚಾ ಕಾರ್ಯಕರ್ತರು ಪ್ರತ್ಯೇಕ ಗೂರ್ಖಾ ಲ್ಯಾಂಡ್ ರಾಜ್ಯಕ್ಕಾಗಿ ಡಾರ್ಜಿಲಿಂಗ್ ನಲ್ಲಿ ನಡೆಯುತ್ತಿರುವ...
ಭದ್ರತಾ ಸಿಬ್ಬಂದಿ
ಭದ್ರತಾ ಸಿಬ್ಬಂದಿ
Updated on
ಡಾರ್ಜಿಲಿಂಗ್: ಗೂರ್ಖಾ ಜನಮುಕ್ತಿ ಮೋರ್ಚಾ ಕಾರ್ಯಕರ್ತರು ಪ್ರತ್ಯೇಕ ಗೂರ್ಖಾ ಲ್ಯಾಂಡ್ ರಾಜ್ಯಕ್ಕಾಗಿ ಡಾರ್ಜಿಲಿಂಗ್ ನಲ್ಲಿ ನಡೆಯುತ್ತಿರುವ ಅನಿರ್ದಿಷ್ಟಾವಧಿ ಪ್ರತಿಭಟನೆ ಶನಿವಾರ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಭಾರತೀಯ ಮೀಸಲು ಬಟಾಲಿಯನ್(ಐಆರ್ ಬಿ)  ಸಹಾಯಕ ಕಮಾಂಡೆಂಟ್ ಅವರನ್ನು ಹತ್ಯೆ ಮಾಡಲಾಗಿದೆ.
ಭದ್ರತಾ ಸಿಬ್ಬಂದಿ ಮತ್ತು ಗೋರ್ಖಾ ಜನ ಮುಕ್ತಿ ಮೋರ್ಚಾ(ಜಿಜೆಎಂ)ದೊಂದಿಗೆ ನಡೆದ ಘರ್ಷಣೆಯಲ್ಲಿ ಐಆರ್ ಬಿ ಸಹಾಯಕ ಕಮಾಂಡೆಂಟ್ ಕಿರಣ್ ತಮಂಗ್ ಅವರು ಗಂಭೀವಾಗಿ ಗಾಯಗೊಂಡಿದ್ದರು. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ಆರ್ ಆರಿ ಬಿ ಮೂಲಗಳು ತಿಳಿಸಿವೆ.
ಈ ಮಧ್ಯೆ ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ನಡೆಸಿದ ಗುಂಡಿನ ದಾಳಿಯಲ್ಲಿ ತಮ್ಮ ಪಕ್ಷದ ಇಬ್ಬರು ಕಾರ್ಯಕರ್ತರು ಮೃತಪಟ್ಟಿದ್ದಾರೆ ಎಂದು ಗೋರ್ಖಾ ಜನ ಮುಕ್ತಿ ಮೋರ್ಚಾದ ಸಹಾಯಕ ಪ್ರಧಾನ ಕಾರ್ಯದರ್ಶಿ ಬಿನಯ್ ತಮಂಗ್ ಅವರು ಹೇಳಿದ್ದಾರೆ. ಆದರೆ ತಮಂಗ್ ಹೇಳಿಕೆಯನ್ನು ತಳ್ಳಿಹಾಕಿರುವ ಸಹಾಯಕ ಪೊಲೀಸ್ ಮಹಾ ನಿರ್ದೇಶಕ ಅನುಜ್ ಶರ್ಮಾ ಅವರು, ಪೊಲೀಸರು ಗೋಲಿಬಾರ್ ಮಾಡಿಲ್ಲ ಎಂದು ಹೇಳಿದ್ದಾರೆ.
ಪ್ರಸ್ತುತ ಡಾರ್ಜಿಲಿಂಗ್ ನಲ್ಲಿ ಪರಿಸ್ಥಿತಿ ಹಿಂಸಾಚಾರಕ್ಕೆ ತಿರುಗಿದ್ದು, ಜಿಜೆಎಂ ಕಾರ್ಯಕರ್ತರು ಪೊಲೀಸರ ಮೇಲೆ ಪೆಟ್ರೋಲ್ ಬಾಂಬ್ ಹಾಗೂ ಕಲ್ಲುಗಳನ್ನು ಎಸೆಯುತ್ತಿದ್ದಾರೆ. ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಟೀಯರ್ ಗ್ಯಾಸ್ ಹಾಗೂ ಲಾಠಿ ಚಾರ್ಜ್ ನಡೆಸುತ್ತಿದ್ದಾರೆ. 
ಜಿಜೆಎಂ ಕಾರ್ಯಕರ್ತರು ಹಾಗೂ ಪೊಲೀಸರ ನಡುವಿನ ಘರ್ಷಣೆಯಲ್ಲಿ ಹಲವರು ಗಾಯಗೊಂಡಿದ್ದು, ಸಿಂಗ್ಮರಿ ಪ್ರದೇಶದಲ್ಲಿ ಸೇನೆ ನಿಯೋಜಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com