ದುರಂತದಲ್ಲಿ 11ಕ್ಕೂ ಹೆಚ್ಚು ಜನರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ. ದುರ್ಘಟನೆ ಸಂಭವಿಸುತ್ತಿದ್ದಂತೆ ಕಾರ್ಯಾಚರಣೆಗಿಳಿಸಿದ ಅಗ್ನಿಶಾಮಕ ದಳದ ಸಿಬ್ಬಂದಿಗಳು ಇದೀಗ ಓರ್ವ ಕೂಲಿ ಕಾರ್ಮಿಕನ ದೇಹವನ್ನು ಹೊರ ತೆಗೆದಿದ್ದಾರೆ. ಮತ್ತಿಬ್ಬರು ವ್ಯಕ್ತಿಗಳಿಗೆ ತೀವ್ರವಾಗಿ ಗಾಯವಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.