ಹಿಂಸಾಚಾರದಕ್ಕೆ ಅವಕಾಶ ನೀಡಬೇಡಿ, ಮಾತುಕತೆ ನಡೆಸಿ: ಜಿಜೆಎಂ ಪ್ರತಿಭಟನಾ ನಿರತರಿಗೆ ರಾಜನಾಥ್ ಕರೆ

ಪ್ರತ್ಯೇಕ ಡಾರ್ಜಿಲಿಂಗ್‌ ರಾಜ್ಯದ ಬೇಡಿಕೆ ಮುಂದಿಟ್ಟು ಪ್ರತಿಭಟನೆ ನಡೆಸುತ್ತಿರುವ ಗೋರ್ಖಾ ಜನಮುಖಿ ಮೋರ್ಚಾಗೆ ಹಿಂಸಾಚಾರ ನಡೆಸದಂತೆ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಕರೆ ನೀಡಿದ್ದಾರೆ.
ಡಾರ್ಜಿಲಿಂಗ್
ಡಾರ್ಜಿಲಿಂಗ್
ನವದೆಹಲಿ: ಪ್ರತ್ಯೇಕ ಡಾರ್ಜಿಲಿಂಗ್‌ ರಾಜ್ಯದ ಬೇಡಿಕೆ ಮುಂದಿಟ್ಟು ಪ್ರತಿಭಟನೆ ನಡೆಸುತ್ತಿರುವ ಗೋರ್ಖಾ ಜನಮುಖಿ ಮೋರ್ಚಾಗೆ ಹಿಂಸಾಚಾರ ನಡೆಸದಂತೆ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಕರೆ ನೀಡಿದ್ದಾರೆ. 
ಹಿಂಸಾಚಾರಕ್ಕೆ ಆಸ್ಪದ ನೀಡುವ ಬದಲು ಮಾತುಕತೆ ನಡೆಸುವಂತೆ ರಾಜನಾಥ್ ಸಿಂಗ್ ಸಲಹೆ ನೀಡಿದ್ದು, ಬೇಡಿಕೆ, ಭಿನ್ನಾಭಿಪ್ರಾಯಕ್ಕೆ ಸಂಬಂಧಿಸಿದ ಎಲ್ಲರೂ ಪರಸ್ಪರ ಮಾತುಕತೆ ನಡೆಸುವ ಮೂಲಕ ಸಮಸ್ಯೆಯನ್ನು ಶಾಂತಿಯುತವಾಗಿ ಬಗೆಹರಿಸಿಕೊಳ್ಳುವುದು ಸೂಕ್ತ ಎಂದು ಅಭಿಪ್ರಾಯಪಟ್ಟಿದ್ದಾರೆ. 
ಭಾರತದಂತಹ ಪ್ರಜಾಪ್ರಭುತ್ವದಲ್ಲಿ ಹಿಂಸಾಚಾರದ ಮೂಲಕ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವುದಕ್ಕೆ ಸಾಧ್ಯವಿಲ್ಲ ಎಂದು ರಾಜನಾಥ್ ಸಿಂಗ್ ಟ್ವೀಟ್ ಮಾಡಿದ್ದಾರೆ. ಇದೇ ವೇಳೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರೊಂದಿಗೆ ಮಾತನಾಡಿರುವ ರಾಜನಾಥ್ ಸಿಂಗ್ ಡಾರ್ಜಿಲಿಂಗ್‌ ಪ್ರತಿಭಟನೆ ಸ್ಥಿತಿ ಬಗ್ಗೆ ಮಾಹಿತಿ ಪಡೆದಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com