ಭೇಟಿ ಬಳಿಕ ಹೇಳಿಕೆ ನೀಡಿರುವ ಅರ್ಜುನ್ ಸಂಪತ್ ಅವರು, ರಜನಿಕಾಂತ್ ಅವರಿಗೆ ನಾವು ಬೆಂಬಲ ನೀಡುತ್ತೇವೆ. ರಾಜಕೀಯ ಪ್ರವೇಶಿಸಿ ತಮಿಳುನಾಡು ರಾಜ್ಯಕ್ಕಾಗಿ ಒಳ್ಳೆಯ ಕೆಲಸಗಳನ್ನು ಮಾಡುವಂತೆ ಮನವಿ ಮಾಡಿಕೊಂಡಿದ್ದೇವೆ. ಅವರ ಪ್ರತಿಕ್ರಿಯೆ ಕೂಡ ಉತ್ತಮವಾಗಿತ್ತು. ತಮಿಳುನಾಡು ರಾಜ್ಯಕ್ಕೆ ಹಾಗೂ ರಾಷ್ಟ್ರಕ್ಕೆ ಏನಾದರೂ ಮಾಡಬೇಕೆಂಬ ಆಸೆ ಅವರ ಮನಸ್ಸಿನಲ್ಲಿದೆ. ರಾಜಕೀಯ ಪ್ರವೇಶ ಕುರಿತ ನಮ್ಮ ಮನವಿಯನ್ನು ಅವರ ಪರಿಗಣಿಸಿದ್ದಾರೆಂದು ಹೇಳಿದ್ದಾರೆ.