ಎಲ್ಲಾ ರಾಜ್ಯಗಳ ಮುಖ್ಯ ಕಾರ್ಯದರ್ಶಿಗಳಿಗೆ ಹಾಗೂ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗಳಿಗೆ ಬರೆದ ನಕಲಿ ಪತ್ರದಲ್ಲಿ ೨೦೧೭, ಆಗಸ್ಟ್ ೧೪ರೊಳಗೆ ಭೂ ದಾಖಲೆಗಳನ್ನು ಡಿಜಿಟಲೀಕರಣಗೊಳಿಸಿ ಆಧಾರ್ ಸಂಖ್ಯೆಗೆ ಜೋಡಣೆ ಮಾಡಬೇಕು ಎಂದು ಸೂಚಿಸಲಾಗಿತ್ತು. ಅಲ್ಲದೆ ಆಧಾರ್ ಲಿಂಕ್ ಮಾಡದಿದ್ದರೆ ಬೇನಾಮಿ ವ್ಯವಹಾರ ತಡೆ ಕಾಯ್ದೆಯಡಿ ಕ್ರಮ ತೆಗೆದುಕೊಳ್ಳುವುದಾಗಿ ಎಚ್ಚರಿಸಲಾಗಿತ್ತು.