ಕೆಲ ದಿನಗಳ ಹಿಂದಷ್ಟೇ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸರ್ಕಾರ ರೈತರ ರೂ.36,000 ಕೋಟಿ ಮತ್ತು ಮಹಾರಾಷ್ಟ್ರ ಸರ್ಕಾರ ರೂ.30,000 ಕೋಟಿ ಸಾಲ ಮನ್ನಾ ಮಾಡಿತ್ತು. ಆದರೆ, ಎಲ್ಲಾ ರೈತರಿಗೂ ಈ ಯೋಜನೆ ವಿಸ್ತರಿಸದೇ ಇರುವುದು ರೈತರ ಆಕ್ರೋಶಕ್ಕೆ ಕಾರಣವಾಗಿದ್ದು. ಈ ನಡುವೆ ಮಧ್ಯಪ್ರದೇಶದಲ್ಲೂ ಸಾಲ ಮನ್ನಾಕ್ಕೆ ಆಗ್ರಹಿಸಿ ಹಿಂಸಾಚಾರಗಳು ಭುಗಿಲೆದ್ದಿವೆ.