ಹಲವು ಪ್ರಮುಖರು, ಗಣ್ಯರು ಶಿಮ್ಲಾಗೆ ಭೇಟಿ ನೀಡಿದ ಸಂದರ್ಭದಲ್ಲಿ ರಾಷ್ಟ್ರಪತಿಗಳ ವಿಶ್ರಾಂತಿ ಧಾಮಕ್ಕೆ ಭೇಟಿ ನೀಡುತ್ತಾರೆ ಮತ್ತು ಕೆಲ ಕಾಲ ಅಲ್ಲಿ ಉಳಿಯುತ್ತಾರೆ. ಆದರೆ ಮೂರು ವಾರಗಳ ಹಿಂದೆ ಅಲ್ಲಿಗೆ ತೆರಳಿದ್ದ ರಾಮನಾಥ್ ಕೋವಿಂದ್ ಅವರು ಸರಿಯಾದ ಅನುಮತಿ ಪಡೆಯದ ಹಿನ್ನೆಲೆಯಲ್ಲಿ ಪ್ರವೇಶ ನಿರಾಕರಿಸಲಾಗಿತ್ತು. ಇದೀಗ ಮುಂದಿನ ರಾಷ್ಟ್ರಪತಿಯಾಗಿ ಆಯ್ಕೆಯಾಗುವ ಮೂಲಕ ಅದರ ಒಡೆಯರಾಗುತ್ತಿದ್ದಾರೆ.