ಎನ್ ಡಿಎ ರಾಷ್ಟ್ರಪತಿ ಅಭ್ಯರ್ಥಿಯಾಗಿ ರಾಮನಾಥ್ ಕೋವಿಂದ್ ಅವರನ್ನು ಬಿಜೆಪಿ ಘೋಷಿಸಿರುವುದು ತಮಗೆ ಸಂತಸ ತಂದಿದೆ ಎಂದು ಎಸ್ ಪಿ ಮುಖಂಡ ಮುಲಾಯಂ ಸಿಂಗ್ ಯಾದವ್ ಹೇಳಿದ್ದಾರೆ. ರಾಮನಾಥ್ ಉತ್ತಮ ಅಭ್ಯರ್ಥಿ, ಅವರನ್ನು ನಾನು ಬಹಳ ಹಿಂದಿನಿಂದಲೂ ನೋಡಿದ್ದೇನೆ, ಎಲ್ಲಕ್ಕಿಂತ ಹೆಚ್ಚಾಗಿ ಬಿಜೆಪಿಗೆ ಹೆಚ್ಚಿನ ಬಹುಮತವಿದೆ, ವಿರೋಧ ಪಕ್ಷಗಳು ಯಾವ ನಿರ್ಧಾರ ಕೈಗೊಳ್ಳಲಿವೆ ಎಂಬುದನ್ನು ನಾನು ಹೇಳಲು ಸಾಧ್ಯವಿಲ್ಲ ಎಂದು ಮುಲಾಯಂ ಹೇಳಿದ್ದಾರೆ,