ವಾಯುನೆಲೆ ಮೇಲಿನ ದಾಳಿಗೆ ಭದ್ರತಾ ಲೋಪವೇ ಕಾರಣ ಎಂದು ಐಎಎಫ್ ತನಿಖಾ ವರದಿಯಲ್ಲಿ ಉಲ್ಲೇಖ ಮಾಡಿತ್ತು. ದಾಳಿ ವೇಳೆ ವಾಯುನೆಲೆ ಮೇಲಿನ ನಿಯಂತ್ರಣ ಕಾರ್ಯದಲ್ಲಿದ್ದ ಏರ್ ಕಮಾಂಡ್ ಜೆ.ಎಸ್ ಧಮೂನ್ ಅವರು ವಿಫಲರಾಗಿದ್ದರು ಎಂದು ತಿಳಿಸಿತ್ತು. ಈ ಹಿನ್ನಲೆಯಲ್ಲಿ ಧಮೂನ್ ಅವರು ರಾಜೀನಾಮೆ ಸಲ್ಲಿಸಿದ್ದಾರೆಂದು ತಿಳಿದುಬಂದಿದೆ.