ವಿಶ್ವಸಂಸ್ಥೆ ಮಧ್ಯಸ್ಥಿಕೆ ಬೇಡ: ದ್ವಿಪಕ್ಷೀಯ ಮಾತುಕತೆ ಮೂಲಕ ಭಾರತ-ಪಾಕ್ ಸಮಸ್ಯೆ ಇತ್ಯರ್ಥ: ಎಂಇಎ

ಕಾಶ್ಮೀರ ವಿಷಯದಲ್ಲಿ ಭಾರತ-ಪಾಕಿಸ್ತಾನದ ನಡುವೆ ವಿಶ್ವಸಂಸ್ಥೆ ಮಧ್ಯಸ್ಥಿಕೆ ವಹಿಸುವುದು ಬೇಡ. ದ್ವಿಪಕ್ಷೀಯ ಮಾತುಕತೆ ಮೂಲಕ ನಾವೇ ಸಮಸ್ಯೆಯನ್ನು ಪರಿಹರಿಸಿಕೊಳ್ಳುವುದಾಗಿ...
ನವಾಜ್ ಷರೀಫ್-ನರೇಂದ್ರ ಮೋದಿ
ನವಾಜ್ ಷರೀಫ್-ನರೇಂದ್ರ ಮೋದಿ
Updated on
ಕಾಶ್ಮೀರ ವಿಷಯದಲ್ಲಿ ಭಾರತ-ಪಾಕಿಸ್ತಾನದ ನಡುವೆ ವಿಶ್ವಸಂಸ್ಥೆ ಮಧ್ಯಸ್ಥಿಕೆ ವಹಿಸುವುದು ಬೇಡ. ದ್ವಿಪಕ್ಷೀಯ ಮಾತುಕತೆ ಮೂಲಕ ನಾವೇ ಸಮಸ್ಯೆಯನ್ನು ಪರಿಹರಿಸಿಕೊಳ್ಳುವುದಾಗಿ ವಿದೇಶಾಂಗ ಸಚಿವಾಲಯದ ವಕ್ತಾರ ಗೋಪಾಲ್ ಬಾಗ್ಲೆ ಅವರು ಹೇಳಿದ್ದಾರೆ. 
ವಿಶ್ವಸಂಸ್ಥೆ ಮುಖ್ಯಸ್ಥ ಅಂಟೋನಿಯೊ ಗುಟೆರಸ್ ಅವರು ಕಾಶ್ಮೀರ ವಿಷಯದಲ್ಲಿ ಭಾರತ-ಪಾಕಿಸ್ತಾನದ ನಡುವೆ ಮಧ್ಯಸ್ಥಿಕೆ ವಹಿಸುತ್ತೇವೆ ಎಂದು ಹೇಳಿರುವುದಾಗಿ ಮಧ್ಯಮಗಳಲ್ಲಿ ವರದಿಯಾಗಿತ್ತು. ಈ ಹಿನ್ನಲೆಯಲ್ಲಿ ಬಾಗ್ಲೆ ಅವರು ನಮ್ಮ ಸಮಸ್ಯೆಯನ್ನು ಮಾತುಕತೆ ಮೂಲಕ ನಾವೇ ಪರಿಹರಿಸಿಕೊಳ್ಳುವುದಾಗಿ ಹೇಳಿದ್ದಾರೆ. 
ವಿಶ್ವಸಂಸ್ಥೆಯಲ್ಲಿ ಜನವರಿ ನಂತರ ಮೊದಲ ಬಾರಿಗೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅಂಟೋನಿಯೊ ಗುಟೆರಸ್ ಅವರು ಭಾರತ ಮತ್ತು ಪಾಕಿಸ್ತಾನದಲ್ಲಿ ಕಾಶ್ಮೀರ ಸಮಸ್ಯೆಯಿಂದಾಗಿ ದ್ವಿಪಕ್ಷೀಯ ಸಂಬಂಧ ಸಾಧಿಸಲು ಸಾಧ್ಯವಾಗುತ್ತಿಲ್ಲ ಈ ಹಿನ್ನೆಲೆಯಲ್ಲಿ ಮಧ್ಯ ಪ್ರವೇಶಿಸುವುದಾಗಿ ಹೇಳಿದ್ದರು.  

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com